ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am