ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm