ಬ್ರೇಕಿಂಗ್ ನ್ಯೂಸ್
05-10-25 07:57 pm HK News Desk ಕರ್ನಾಟಕ
ಬಾಗಲಕೋಟ, ಅ.5 : ಸಿಎಂ ಅವ್ರ ಬಗ್ಗೆ ಗೌರವ ಇದೆ, ಆದರೆ ಸಮಾಜ ವಿಘಟನೆ ಮಾಡುವವರಿಗೆ ಸಪೋರ್ಟ್ ಮಾಡುವುದನ್ನು ಬಯಸಲ್ಲ. ಆ ತಂಡದಿಂದ ಹಿಂದೆಯೂ ಅಂತರಹ ಕಾಯ್ದುಕೊಳ್ಳಿ ಅಂತ ಹೇಳಿದ್ದೆವು. ಈಗಲೂ ಅಂತರ ಕಾಯ್ದುಕೊಳ್ಳಿ ಅಂತ ಹೇಳ್ತೀವಿ. ಆ ಗುಂಪಿನಲ್ಲಿ ರಾಜ್ಯದ ಸಿಎಂ ಪಾಲ್ಗೊಳ್ಳೋದು ಸೂಕ್ತವಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಕೇಡು ಬಂದೀತು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಹಿಂದೆ ಬಹುದೊಡ್ಡ ನಾಯಕರು, ದೊಡ್ಡ ಸ್ವಾಮೀಜಿಗಳು ಪ್ರತ್ಯೇಕ ಧರ್ಮ ಮಾಡಲಿಕ್ಕೆ ಹೋಗಿ ಕೈಸುಟ್ಟುಕೊಂಡಿದ್ದಾರೆ. ಇವತ್ತು ಮತ್ತೆ ವ್ಯರ್ಥ ಪ್ರಯತ್ನ ಮಾಡ್ತಿದ್ದಾರೆ. ಬಹುಶಃ ಪ್ರತಿ ಜಿಲ್ಲೆಯಲ್ಲಿ ಜನತೆಗೆ ವಿನಂತಿ ಮಾಡ್ಕೊಂಡಿದ್ದಾರೆ. ಸಿಎಂಗೆ ಸನ್ಮಾನ ಮಾಡ್ತೇವೆ ಅಂತ ಹೇಳಿ ಬರ ಹೇಳಿದ್ದಾರೆ. ಬಹಳಷ್ಟು ಮಠಾದಿಪತಿಗಳಿಗೆ ಫೋನ್ ಕರೆ ಮಾಡಿ ಬಹು ಸಂಖ್ಯೆಯಲ್ಲಿ ಬರಬೇಕು ಅಂತ ತಿಳಿಸಿದ್ದಾರೆ.
ಪ್ರತ್ಯೇಕ ಲಿಂಗಾಯತರು ಅನ್ನುವ ಹೆಸರನ್ನ ಮಾಡ್ತಿರೋದು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡ್ತಿರೋ ದ್ರೋಹವಾಗಿದೆ. ಸಮಾಜದ ವಿಘಟನೆ ಕೆಲಸ ಇದಾಗಿದೆ ಅಂತ ಸಿಎಂ ಗಮನಕ್ಕೆ ತರಲು ಬಯಸುತ್ತೇವೆ. ಇಡೀ ರಾಜ್ಯದ ಮಠಾಧೀಶರ ಒಲವು ಏನಿದೆ ಅನ್ನೋದನ್ನ ಹುಬ್ಬಳ್ಳಿಯ ಸಮಾವೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಕೇರಳ ಇತ್ಯಾದಿ ಎಲ್ಲ ರಾಜ್ಯಗಳ ಜನ ವೀರಶೈವ ಲಿಂಗಾಯತ ಒಂದೇ ಅನ್ನೋದ್ರ ಕಡೆ ಇದ್ದಾರೆ ಹೊರತು, ಭಿನ್ನ ಧ್ವನಿ ಎತ್ತಿಲ್ಲ. ಕೆಲವೇ ಬೆರಳೆಣಿಕೆಯ ಸಮಾಜಕ್ಕೆ ಬೇಡವಾದ ಮಠಾಧಿಪತಿಗಳ ಈ ಬೇಡಿಕೆ ಹೊಂದಿದ್ದಾರೆ. ಜನರ ಭಿನ್ನ ಧ್ವನಿಯನ್ನು ಮುಖ್ಯಮಂತ್ರಿಗಳು ಮನ್ನಿಸಿದರೆ ತಮ್ಮ ವ್ಯಕ್ತಿತ್ವ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗುತ್ತೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹೆಸರಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಪಾಲ್ಗೊಳ್ಳಬಾರದು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
Lingayat seer Fakir Dingaleshwara Swamiji has cautioned Chief Minister Siddaramaiah against supporting efforts to create a separate Lingayat identity, calling it divisive and harmful to both society and the Congress party.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm