ಬ್ರೇಕಿಂಗ್ ನ್ಯೂಸ್
07-10-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.07: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಸ್ಟೂಡಿಯೋಗೆ ರಾಮನಗರ ಜಿಲ್ಲಾಡಳಿತದಿಂದ ದಾಳಿ ನಡೆಸಿ ಶೋ ಸ್ಥಗಿತಗೊಳಿದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದು ನಟ್ಟು ಬೋಲ್ಟ್ನ ಪ್ರತಿಫಲ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ.
ಬಿಗ್ ಬಾಸ್ ಮನೆ ಬಂದ್ ಮಾಡಿಸಿದ ಹಿನ್ನೆಲೆ ಮಂಗಳವಾರ ಸಂಜೆ ಫೇಸ್ಬುಕ್ ಲೈವ್ ಬಂದ ಪ್ರಶಾಂತ್ ಸಂಬರಗಿಯವರು ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದು ನಟ ಸುದೀಪ್ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡು ಸರ್ಕಾರ ಆಡಿದ ಆಟ ಎಂದು ದೂರಿದ್ದಾರೆ.


ಕಳೆದ ವರ್ಷ ಬಿಗ್ ಬಾಸ್ ಸೀಜನ್ ನಡೆಯುವಾಗಲೂ ಹುಲಿ ಉಗರು ಕೇಸ್ ನಡೆಸಿ ದೊಡ್ಡ ರಂಪ ಮಾಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರ ಯಾರನ್ನೋ ಒಬ್ಬರನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದೆ. ಸ್ಟೂಡಿಯೋ ಇರುವ ಜಾಗ ಮಾಲೀಕರು ಜೆಡಿಎಸ್ ಕೇಂದ್ರ ಸಚಿವರೊಬ್ಬರಿಗೆ ಹತ್ತಿರದ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಬರಗಿ ಹೇಳಿದರು.
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರು. ಅವರು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಜತೆಗೆ ಅವರು ಡಿಸಿಎಂ ಈ ಹಿಂದೆ ಹೇಳಿದ್ದ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಬಿಗ್ ಬಾಸ್ ಶೋ ಆರಂಭವಾಗಿದ್ದು, ಅವರನ್ನು ಗುರಿಯಾಗಿಸಿಕೊಂಡು ಈ ರಾಜಕೀಯ ಆಟ ಆಡಿದ್ದಾರೆ. ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಈ ಹಿಂದೆ ರಾಜಕಾರಣಿ ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಸಂಬರಗಿ ಕಿಡಿಕಾರಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮ
ಸರ್ಕಾರವು ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮಕೈಗೊಂಡಿದೆ. ಇದು ಕನ್ನಡ ಮನೋರಂಜನಾ ವಲಯವು ತಲೆ ತಗ್ಗಿಸಬೇಕಾದ ಸಂಗತಿ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೊಟ್ಟ 30 ದಿನಗಳವರೆಗೂ ಅವಕಾಶ ನೀಡಲಾಗುತ್ತದೆ. ಆದರೆ, ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಮೂಲದ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗೆ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ಮಾಡಿದೆ ಎಂದು ಹೇಳಿದ್ದಾರೆ.
The sudden halt of Bigg Boss Kannada Season 12 after the Ramnagara district administration sealed Jalewood Studios has now taken a political turn. Former contestant Prashanth Sambargi has alleged that the action was a politically motivated move targeting actor Sudeep and certain JDS leaders close to the studio owners.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm