ಬ್ರೇಕಿಂಗ್ ನ್ಯೂಸ್
07-10-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.07: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಸ್ಟೂಡಿಯೋಗೆ ರಾಮನಗರ ಜಿಲ್ಲಾಡಳಿತದಿಂದ ದಾಳಿ ನಡೆಸಿ ಶೋ ಸ್ಥಗಿತಗೊಳಿದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದು ನಟ್ಟು ಬೋಲ್ಟ್ನ ಪ್ರತಿಫಲ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ.
ಬಿಗ್ ಬಾಸ್ ಮನೆ ಬಂದ್ ಮಾಡಿಸಿದ ಹಿನ್ನೆಲೆ ಮಂಗಳವಾರ ಸಂಜೆ ಫೇಸ್ಬುಕ್ ಲೈವ್ ಬಂದ ಪ್ರಶಾಂತ್ ಸಂಬರಗಿಯವರು ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದು ನಟ ಸುದೀಪ್ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡು ಸರ್ಕಾರ ಆಡಿದ ಆಟ ಎಂದು ದೂರಿದ್ದಾರೆ.


ಕಳೆದ ವರ್ಷ ಬಿಗ್ ಬಾಸ್ ಸೀಜನ್ ನಡೆಯುವಾಗಲೂ ಹುಲಿ ಉಗರು ಕೇಸ್ ನಡೆಸಿ ದೊಡ್ಡ ರಂಪ ಮಾಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರ ಯಾರನ್ನೋ ಒಬ್ಬರನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದೆ. ಸ್ಟೂಡಿಯೋ ಇರುವ ಜಾಗ ಮಾಲೀಕರು ಜೆಡಿಎಸ್ ಕೇಂದ್ರ ಸಚಿವರೊಬ್ಬರಿಗೆ ಹತ್ತಿರದ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಬರಗಿ ಹೇಳಿದರು.
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರು. ಅವರು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಜತೆಗೆ ಅವರು ಡಿಸಿಎಂ ಈ ಹಿಂದೆ ಹೇಳಿದ್ದ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಬಿಗ್ ಬಾಸ್ ಶೋ ಆರಂಭವಾಗಿದ್ದು, ಅವರನ್ನು ಗುರಿಯಾಗಿಸಿಕೊಂಡು ಈ ರಾಜಕೀಯ ಆಟ ಆಡಿದ್ದಾರೆ. ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಈ ಹಿಂದೆ ರಾಜಕಾರಣಿ ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಸಂಬರಗಿ ಕಿಡಿಕಾರಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮ
ಸರ್ಕಾರವು ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮಕೈಗೊಂಡಿದೆ. ಇದು ಕನ್ನಡ ಮನೋರಂಜನಾ ವಲಯವು ತಲೆ ತಗ್ಗಿಸಬೇಕಾದ ಸಂಗತಿ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೊಟ್ಟ 30 ದಿನಗಳವರೆಗೂ ಅವಕಾಶ ನೀಡಲಾಗುತ್ತದೆ. ಆದರೆ, ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಮೂಲದ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗೆ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ಮಾಡಿದೆ ಎಂದು ಹೇಳಿದ್ದಾರೆ.
The sudden halt of Bigg Boss Kannada Season 12 after the Ramnagara district administration sealed Jalewood Studios has now taken a political turn. Former contestant Prashanth Sambargi has alleged that the action was a politically motivated move targeting actor Sudeep and certain JDS leaders close to the studio owners.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm