ಬ್ರೇಕಿಂಗ್ ನ್ಯೂಸ್
15-10-25 03:32 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ಜೊತೆಗೆ ರಘು ದೀಕ್ಷಿತ್ ಇದೇ ತಿಂಗಳ ಕೊನೆಯಲ್ಲಿ ವಿವಾಹ ಆಗಲಿದ್ದಾರೆ.
ಬಹು ಭಾಷೆಗಳಲ್ಲಿ ಜಾನಪದ ಸಂಗೀತಕ್ಕೆ ಹೆಸರು ಪಡೆದಿರುವ ಗಾಯಕ ರಘು ದೀಕ್ಷಿತ್ ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ್ತಿ, ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರೊಂದಿಗೆ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಮುಂದಾಗಿದ್ದಾರೆ. ಇವರ ಪ್ರೀತಿ ಪ್ರಣಯ 'ಸಾಕು ಇನ್ನೂ ಸಾಕು' ಎನ್ನುವ ಸಂಗೀತ ಆಲ್ಬಮ್ ಸಹಯೋಗದಲ್ಲಿ ಪ್ರಾರಂಭವಾಗಿತ್ತು. ಒಡನಾಟದ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಇದೆಲ್ಲಾ ಆಕಸ್ಮಿಕವಾಗಿ ಹುಟ್ಟಿಕೊಂಡಿತು. ವಾರಿಜಾಶ್ರೀ ಅವರ ಪೋಷಕರ ಆಶೀರ್ವಾದದೊಂದಿಗೆ, ಜೀವನದ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸಲು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಅವರು ಸಾಕಷ್ಟು ವಿಡಿಯೊ ಸಾಂಗ್ ಆಲ್ಬಂಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅವರು ಹಾಡಿದ್ದ 'ಭರವಸೆಯ ಬದುಕು' ವಿಡಿಯೋ ಸಾಂಗ್ ಬದುಕಿನಲ್ಲಿ ಸಾಕಷ್ಟು ನೋವುಂಡವರಿಗೆ ಆತ್ಮವಿಶ್ವಾಸ ತುಂಬಿತ್ತು. ಖ್ಯಾತ ನೃತ್ಯ ಕಲಾವಿದೆ ಮಯೂರಿ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದ ರಘು ದೀಕ್ಷಿತ್ 2019ರಲ್ಲಿ ಭಿನ್ನಾಭಿಪ್ರಾಯದಿಂದಾಗಿ ವಿಚ್ಛೇದನ ಪಡೆದಿದ್ದರು.
Renowned musician Raghu Dixit is all set to tie the knot again at the age of 50. He will marry Grammy-nominated singer and flautist Varijashree Venugopal later this month. Their bond began during the making of the music album “Saaku Innu Saaku” and gradually blossomed into love.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm