ಬ್ರೇಕಿಂಗ್ ನ್ಯೂಸ್
28-12-20 02:37 pm Headline Karnataka News Network ಕರ್ನಾಟಕ
ಬೆಳಗಾವಿ, ಡಿಸೆಂಬರ್ 28; ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಪ್ರಯತ್ನಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದಾರೆ.
ಸೋಮವಾರ ಏಕಾಏಕಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಲು ಪ್ರಯತ್ನ ನಡೆಸಿದರು. ಆಗ ಪೊಲೀಸರು ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭವನ್ನು ಕಾರ್ಯಕರ್ತರು ನಿಲ್ಲಿಸಿದರು.
ಇದರಿಂದಾಗಿ ಮಹಾನಗರ ಪಾಲಿಕೆ ಎದುರು ಹೈಡ್ರಾಮಾ ನಡೆಯಿತು. ಪೊಲೀಸರು ಮೊಳೆ, ಸುತ್ತಿಗೆಗಳನ್ನು ವಶಕ್ಕೆ ಪಡೆದುಕೊಂಡರು.

ಕನ್ನಡ ಹೋರಾಟಗಾರರು ಧ್ವಜಸ್ತಂಭ ಅಳವಡಿಸಿ ನಾಡಗೀತೆ ಹಾಡಿದರು. ಪೊಲೀಸರು ಅವರನ್ನು ಸ್ಥಳದಿಂದ ಕಳಿಸಲು ಪ್ರಯತ್ನ ನಡೆಸಿದರು. ಆಗ ವಾಗ್ವಾದ ಆರಂಭವಾಯಿತು. ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ಇತಿಹಾಸ ಬರೆದರು. ಪೊಲೀಸರು ಮತ್ತು ಹೋರಾಟಗಾರರ ನಡುವೆ ಜಟಾಪಟಿ ಮುಂದುವರೆದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm