ಬ್ರೇಕಿಂಗ್ ನ್ಯೂಸ್
18-10-25 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.
ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ ಹೋಗಿದ್ದಳು. ರಾತ್ರಿಯಾದರೂ ಯುವಕ ಹೊರಗೆ ಬಾರದೇ ಇದ್ದುದರಿಂದ ಹೊಟೇಲ್ ಸಿಬಂದಿ ಬಾಗಿಲು ಬಡಿದಿದ್ದು ಓಪನ್ ಆಗದೇ ಇದ್ದಾಗ ಮಾಸ್ಟರ್ ಕೀ ಮೂಲಕ ಓಪನ್ ಮಾಡಿದ್ದಾರೆ.
ಆಗ ಯುವಕ ತಕ್ಷಿತ್ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿದ್ದು ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿ ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸನ್ ಆಗಿ ಮೆಡಿಕಲ್ ನಿಂದ ಮಾತ್ರೆಗಳನ್ನು ತರಿಸಿ ತಿಂದಿದ್ದಾರಂತೆ.
ತಕ್ಷಿತ್ ಹಾಗೂ ಯುವತಿ ಮಂಗಳೂರಿನ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡಿದ್ದರು ಎನ್ನಲಾಗ್ತಿದೆ. ಮೈಸೂರಿನಲ್ಲಿ ಓದೋಕೆ ಹೋಗ್ತೀನಿ ಅಂತ ಹೇಳಿ ಯುವಕ, ಲವರ್ ಜೊತೆಗೆ ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ. ಯುವಕ ದಿಢೀರ್ ಸಾವಿಗೀಡಾಗಿದ್ದು ಅನುಮಾನ ಮೂಡಿಸಿದೆ. ಹೊಟೇಲ್ ಸಿಸಿಟಿವಿ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಲಗಿದಲ್ಲೇ ಸಾವನ್ನಪ್ಪಿದ್ದರಿಂದ ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯೂ ಇದೆ. ಯುವಕ ಸಾವನ್ನಪ್ಪಿದ ಬಗ್ಗೆ ತಿಳಿದೇ ಯುವತಿ ರೂಮ್ ಬಿಟ್ಟು ಹೋಗಿದ್ದಾಳೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 20-year-old youth from Puttur, identified as Takshith, was found dead under mysterious circumstances at Grand Choice Lodge in Bengaluru’s Madiwala area. He had reportedly been staying there for eight days with his girlfriend, Rakshitha from Virajpet (Kodagu).
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm