ಬ್ರೇಕಿಂಗ್ ನ್ಯೂಸ್
18-10-25 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.
ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ ಹೋಗಿದ್ದಳು. ರಾತ್ರಿಯಾದರೂ ಯುವಕ ಹೊರಗೆ ಬಾರದೇ ಇದ್ದುದರಿಂದ ಹೊಟೇಲ್ ಸಿಬಂದಿ ಬಾಗಿಲು ಬಡಿದಿದ್ದು ಓಪನ್ ಆಗದೇ ಇದ್ದಾಗ ಮಾಸ್ಟರ್ ಕೀ ಮೂಲಕ ಓಪನ್ ಮಾಡಿದ್ದಾರೆ.
ಆಗ ಯುವಕ ತಕ್ಷಿತ್ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿದ್ದು ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿ ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸನ್ ಆಗಿ ಮೆಡಿಕಲ್ ನಿಂದ ಮಾತ್ರೆಗಳನ್ನು ತರಿಸಿ ತಿಂದಿದ್ದಾರಂತೆ.
ತಕ್ಷಿತ್ ಹಾಗೂ ಯುವತಿ ಮಂಗಳೂರಿನ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡಿದ್ದರು ಎನ್ನಲಾಗ್ತಿದೆ. ಮೈಸೂರಿನಲ್ಲಿ ಓದೋಕೆ ಹೋಗ್ತೀನಿ ಅಂತ ಹೇಳಿ ಯುವಕ, ಲವರ್ ಜೊತೆಗೆ ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ. ಯುವಕ ದಿಢೀರ್ ಸಾವಿಗೀಡಾಗಿದ್ದು ಅನುಮಾನ ಮೂಡಿಸಿದೆ. ಹೊಟೇಲ್ ಸಿಸಿಟಿವಿ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಲಗಿದಲ್ಲೇ ಸಾವನ್ನಪ್ಪಿದ್ದರಿಂದ ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯೂ ಇದೆ. ಯುವಕ ಸಾವನ್ನಪ್ಪಿದ ಬಗ್ಗೆ ತಿಳಿದೇ ಯುವತಿ ರೂಮ್ ಬಿಟ್ಟು ಹೋಗಿದ್ದಾಳೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 20-year-old youth from Puttur, identified as Takshith, was found dead under mysterious circumstances at Grand Choice Lodge in Bengaluru’s Madiwala area. He had reportedly been staying there for eight days with his girlfriend, Rakshitha from Virajpet (Kodagu).
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm