ಬ್ರೇಕಿಂಗ್ ನ್ಯೂಸ್
19-10-25 07:00 pm HK News Desk ಕರ್ನಾಟಕ
ಕಲಬುರಗಿ, ಅ.19: ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ತಹಸೀಲ್ದಾರ್ ಅನುಮತಿ ಹೊರತಾಗಿಯೂ ಪಥಸಂಚಲನ ನಡೆಸಿದ ನೂರಾರು ಆರೆಸ್ಸೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಆರೆಸ್ಸೆಸ್ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಥಸಂಚಲನ ನಡೆಸಲು ಸೇಡಂ ತಾಲೂಕಿನ ತಹಸೀಲ್ದಾರ್ ಗೆ ಅನುಮತಿ ಕೇಳಲಾಗಿತ್ತು. ತಹಸೀಲ್ದಾರ್ ಅನುಮತಿ ನೀಡದಿದ್ದರೂ ಸಂಜೆ 4 ಗಂಟೆ ವೇಳೆಗೆ ಆರೆಸ್ಸೆಸ್ ಕಾರ್ಯಕರ್ತರು ಸೇರಿದ್ದು ಪಟ್ಟಣದ ಮಾತೃಛಾಯ ಶಾಲೆಯಿಂದ ಬಸವೇಶ್ವರ ವೃತ್ತದ ವರೆಗೆ ಪಥಸಂಚಲನ ಆರಂಭಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೇಡಂ ಪಟ್ಟಣದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅನುಮತಿ ಇಲ್ಲದೆ ರ್ಯಾಲಿ ಆರಂಭಿಸಿದ್ದರಿಂದ ಪೊಲೀಸರು ನೂರಾರು ಆರ್ಎಸ್ಎಸ್ ಕಾರ್ಯಕರ್ತರನ್ನ ಬಂಧಿಸಿದ್ದು ಬಸ್ನಲ್ಲಿ ಕರೆದ್ಯೊಯ್ದಿದ್ದಾರೆ. ಪೊಲೀಸರು ತಡೆ ಹಾಕಿದ್ದಕ್ಕೆ ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರದಲ್ಲಿ ನ.2ರಂದು ಪಥಸಂಚಲನ ನಿಗದಿ
ಇದೇ ವೇಳೆ, ಚಿತ್ತಾಪುರ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವುದನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಿಚಾರಣೆ ವೇಳೆ ನ.2ಕ್ಕೆ ಮುಂದಿನ ದಿನಾಂಕದ ಬಗ್ಗೆ ಆರೆಸ್ಸೆಸ್ ಪರ ವಕೀಲರು ಕೇಳಿಕೊಂಡಿದ್ದು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಲಾಗಿದೆ. ನವೆಂಬರ್ 2 ರಂದು ಪಥಸಂಚಲನ ನಡೆಸಲು ಅನುಮತಿ ಕೇಳಿದ ಆರ್ಎಸ್ಎಸ್ ಮನವಿಗೆ ಹೈಕೋರ್ಟ್ ಒಪ್ಪಿಗೆ ನೀಡಿದ್ದು ಹೊಸ ಅರ್ಜಿ ಸಲ್ಲಿಸಲು ಸೂಚಿಸಿದೆ.
ಅ.19ರಂದು ಚಿತ್ತಾಪುರ ಪಟ್ಟಣದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ಕೇಳಲಾಗಿತ್ತು. ಆದರೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ಈ ಬಗ್ಗೆ ಆರ್ಎಸ್ಎಸ್ ಪರ ವಕೀಲರಾದ ಸತ್ಯಾನಾರಾಯಣ ಆಚಾರ್ಯ ಹಾಗೂ ವಾದಿರಾಜ ಕಾಡ್ಲೂರ ಹೇಳಿಕೆ ನೀಡಿದ್ದು ಇವತ್ತು ಒಂದೇ ದಿನ ಎರಡು ಸಂಘಟನೆಗಳು ಪಥಸಂಚಲನಕ್ಕೆ ಅವಕಾಶ ಕೇಳಿದ ಕಾರಣ ನಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಆದರೆ RSS ಕಡೆಯಿಂದ ಅ.13ರಂದೇ ಅರ್ಜಿ ಸಲ್ಲಿಸಲಾಗಿತ್ತು. ಇನ್ನೊಂದು ಸಂಘಟನೆಯವರು ನಿನ್ನೆ ಅರ್ಜಿ ಸಲ್ಲಿಸಿದ್ದಾರೆ. ತಾಲೂಕು ಆಡಳಿತ ಇದೇ ಕಾರಣ ಮುಂದೊಡ್ಡಿ ನಮಗೆ ಅನುಮತಿ ನಿರಾಕರಿಸಿತ್ತು. ಬೇರೊಂದು ದಿನ ನಿಗದಿ ಮಾಡಬಹುದಾ ಎಂದು ಹೈಕೋರ್ಟ್ ಕೇಳಿತ್ತು. ನಾವು ಧಾರಾಳವಾಗಿ ಆಗಬಹುದು ಅಂತ ಹೇಳಿ ನ.2ರಂದು ಮಾಡುತ್ತೇವೆ ಎಂದೆವು. ಅದಕ್ಕೆ ಹೈಕೋರ್ಟ ವಿಚಾರಣೆಯನ್ನು ಅ.24 ಕ್ಕೆ ಮುಂದೂಡಿದೆ ಎಂದು ತಿಳಿಸಿದರು.
In Sedam, Kalaburagi district, police detained hundreds of RSS activists who conducted a route march without official permission from the Tahsildar. Despite being denied approval, the activists began their march from Matru Chhaya School to Basaveshwara Circle, prompting heavy police deployment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am