ಬ್ರೇಕಿಂಗ್ ನ್ಯೂಸ್
22-10-25 08:12 pm HK News Desk ಕರ್ನಾಟಕ
ಬೆಳಗಾವಿ, ಅ.22 : ರಾಜ್ಯ ಸರ್ಕಾರದ ಹಿರಿಯ ಸಚಿವ ಸತೀಶ್ ಜಾರಕಿಹೊಳಿಯವರೇ ಮುಂದಿನ ಸಿಎಂ ಆಗುತ್ತಾರೆಯೇ? ಈ ರೀತಿಯ ಅನುಮಾನದ ಪ್ರಶ್ನೆ ಮೂಡಲು ಕಾರಣವಾಗಿದ್ದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆ.
‘ನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ಧಾಂತದ ನಾಯಕರು ಸಿಎಂ ಸ್ಥಾನಕ್ಕೆ ಬರಬೇಕಾಗಿದೆ. ಸತೀಶ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸ್ತಾರೆ ಎಂಬ ವಿಶ್ವಾಸ ಇದೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ಹೇಳಿದ್ದು ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಯಬಾಗದಲ್ಲಿ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ.
ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿರುವಾಗಲೇ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತಲೇ ಬಂದಿದ್ದ ಪುತ್ರ ಯತೀಂದ್ರ ದಿಢೀರ್ ಆಗಿ ಮಾತು ಬದಲಿಸಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ಮುನ್ಸೂಚನೆ ನೀಡುವ ರೀತಿ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿದೆ, ವೈಚಾರಿಕ ನಿಲುವಿನ ಮತ್ತೊಬ್ಬ ನಾಯಕನ ಅಗತ್ಯವಿದೆ, ಆ ಜಾಗಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಾರಕಿಹೊಳಿ ಮುಂದಿನ ಸಿಎಂ ಸ್ಥಾನಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ವಾದ ಮುಂದಿಟ್ಟಿದ್ದಾರೆ.
ಮೊನ್ನೆಯಷ್ಟೇ ಬೆಳಗಾವಿ ಡಿಸಿಸಿ ಬ್ಯಾಂಕ್ ಚುಕ್ಕಾಣಿಯನ್ನು ಭಾರೀ ಪೈಪೋಟಿ ಇದ್ದರೂ ಸತೀಶ್ ಜಾರಕಿಹೊಳಿ ಬಣ ಬಗಲಿಗೆ ಹಾಕಿಕೊಂಡಿತ್ತು. ಡಿಸಿಸಿ ಚುನಾವಣೆ ವಿಷಯದಲ್ಲಿ ಜಾರಕಿಹೊಳಿ ಕುಟುಂಬವೂ ಒಂದಾಗಿತ್ತು. ಇದೀಗ ಸಿಎಂ ಸ್ಥಾನಕ್ಕು ಜಾರಕಿಹೊಳಿ ಕುಟುಂಬವೇ ಟವೆಲ್ ಹಾಕುತ್ತಾ ಎನ್ನುವ ಅನುಮಾನ ಮೂಡಿದೆ. ಡಿಕೆಶಿ ಸಿಎಂ ಆಗುತ್ತಾರೆಂದು ಅವರ ಪರವಾಗಿರುವ ಶಾಸಕರು ಹೇಳುತ್ತ ಬಂದರೂ ಹಿರಿಯ ಸಚಿವರು ವಿರೋಧ ನಿಲುವು ಹೊಂದಿದ್ದಾರೆ. ಇದರ ನಡುವಲ್ಲೇ ಜಾರಕಿಹೊಳಿ ಸಿಎಂ ಸ್ಥಾನಕ್ಕೆ ಅರ್ಹ ವ್ಯಕ್ತಿಯೆಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರನೇ ಬ್ಯಾಟಿಂಗ್ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
In a statement that has sparked major political speculation, Karnataka CM Siddaramaiah’s son, Yathindra Siddaramaiah, has said that senior minister Satish Jarkiholi is a suitable and deserving candidate for the Chief Minister’s post.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm