ಬ್ರೇಕಿಂಗ್ ನ್ಯೂಸ್
27-10-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : "ನವೆಂಬರ್ ಕ್ರಾಂತಿ" ಮತ್ತು ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳನ್ನು ತಳ್ಳಿಹಾಕಿರುವ ಸಚಿವ ಸತೀಶ್ ಜಾರಕಿಹೊಳಿ, ಪಕ್ಷದ ಹೈಕಮಾಂಡ್ ಅಂತಹ ಯಾವುದೇ ಕ್ರಾಂತಿಗೆ ಅವಕಾಶ ನೀಡುವುದಿಲ್ಲ. ಮತ್ತು ಕರ್ನಾಟಕದಲ್ಲಿ ಯಾರು ಕೂಡ ಶಿಂಧೆ, ಪವಾರ್ ಆಗಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ. ಮತ್ತೊಬ್ಬ ಏಕನಾಥ್ ಶಿಂಧೆ ಅಥವಾ ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದರು. ಈ ಮೂಲಕ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂಡಾಯವೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಸಚಿವ ಸಂಪುಟ ಪುನರ್ರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ, "ನಾನು ಈ ಬಗ್ಗೆ ಹಲವು ಬಾರಿ ಹೇಳಿದ್ದೇನೆ, ನನಗೆ ಅದರ ಬಗ್ಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಲಾಗುತ್ತದೆ. ಆದ್ದರಿಂದ ನಾನು ಇದರ ಬಗ್ಗೆ ಏನನ್ನೂ ಹೇಳಲಾರೆ" ಎಂದರು.
ನವೆಂಬರ್ ಕ್ರಾಂತಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷವಿದೆ ಮತ್ತು ಹೈಕಮಾಂಡ್ ಇದೆ. ಅವರು ಯಾವುದೇ ಕ್ರಾಂತಿಗೆ ಏಕೆ ಅವಕಾಶ ನೀಡುತ್ತಾರೆ? ಅವರು ಅದಕ್ಕೆ ಅನುಮತಿಸುವುದಿಲ್ಲ" ಎಂದು ಹೇಳಿದರು. ಮಹಾರಾಷ್ಟ್ರ ಮಾದರಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ವಿಪಕ್ಷಗಳು ಭವಿಷ್ಯ ನುಡಿದಿವೆ. ಕರ್ನಾಟಕದಲ್ಲಿ ಏಕನಾಥ ಶಿಂಧೆ ಹಾಗೂ ಅಜಿತ್ ಪವಾರ್ ರೀತಿಯಲ್ಲಿ ನಾಯಕತ್ವ ಹುಟ್ಟಿಕೊಳ್ಳುತ್ತದೆಯೇ? ಎಂದು ಕೇಳಿದಾಗ, ಅಂತಹ ಪ್ರಯತ್ನ ಅಸಾಧ್ಯ ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಪಕ್ಷ ಮತ್ತು ಸರ್ಕಾರದಿಂದ ಪ್ರತ್ಯೇಕವಾದ ಅಹಿಂದ ಚಳುವಳಿಯನ್ನು ಮುನ್ನಡೆಸುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೂ, ಮುಖ್ಯಮಂತ್ರಿ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ನಾನು ಸಿಎಂ ಹುದ್ದೆ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಕೇಳಿಲ್ಲ ಮತ್ತು ಅವರು (ಯತೀಂದ್ರ) ಕೂಡ ಸಿಎಂ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಲಿಲ್ಲ ಎಂದು ಹೇಳಿದರು.
Rejecting speculations about a possible “November Revolution” and leadership change in the Congress, Minister Satish Jarkiholi asserted that the party high command will not allow any such rebellion in Karnataka.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:02 pm
Mangaluru Staffer
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm