ಬ್ರೇಕಿಂಗ್ ನ್ಯೂಸ್
27-10-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : "ನವೆಂಬರ್ ಕ್ರಾಂತಿ" ಮತ್ತು ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳನ್ನು ತಳ್ಳಿಹಾಕಿರುವ ಸಚಿವ ಸತೀಶ್ ಜಾರಕಿಹೊಳಿ, ಪಕ್ಷದ ಹೈಕಮಾಂಡ್ ಅಂತಹ ಯಾವುದೇ ಕ್ರಾಂತಿಗೆ ಅವಕಾಶ ನೀಡುವುದಿಲ್ಲ. ಮತ್ತು ಕರ್ನಾಟಕದಲ್ಲಿ ಯಾರು ಕೂಡ ಶಿಂಧೆ, ಪವಾರ್ ಆಗಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ. ಮತ್ತೊಬ್ಬ ಏಕನಾಥ್ ಶಿಂಧೆ ಅಥವಾ ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದರು. ಈ ಮೂಲಕ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂಡಾಯವೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಸಚಿವ ಸಂಪುಟ ಪುನರ್ರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ, "ನಾನು ಈ ಬಗ್ಗೆ ಹಲವು ಬಾರಿ ಹೇಳಿದ್ದೇನೆ, ನನಗೆ ಅದರ ಬಗ್ಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಲಾಗುತ್ತದೆ. ಆದ್ದರಿಂದ ನಾನು ಇದರ ಬಗ್ಗೆ ಏನನ್ನೂ ಹೇಳಲಾರೆ" ಎಂದರು.
ನವೆಂಬರ್ ಕ್ರಾಂತಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷವಿದೆ ಮತ್ತು ಹೈಕಮಾಂಡ್ ಇದೆ. ಅವರು ಯಾವುದೇ ಕ್ರಾಂತಿಗೆ ಏಕೆ ಅವಕಾಶ ನೀಡುತ್ತಾರೆ? ಅವರು ಅದಕ್ಕೆ ಅನುಮತಿಸುವುದಿಲ್ಲ" ಎಂದು ಹೇಳಿದರು. ಮಹಾರಾಷ್ಟ್ರ ಮಾದರಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ವಿಪಕ್ಷಗಳು ಭವಿಷ್ಯ ನುಡಿದಿವೆ. ಕರ್ನಾಟಕದಲ್ಲಿ ಏಕನಾಥ ಶಿಂಧೆ ಹಾಗೂ ಅಜಿತ್ ಪವಾರ್ ರೀತಿಯಲ್ಲಿ ನಾಯಕತ್ವ ಹುಟ್ಟಿಕೊಳ್ಳುತ್ತದೆಯೇ? ಎಂದು ಕೇಳಿದಾಗ, ಅಂತಹ ಪ್ರಯತ್ನ ಅಸಾಧ್ಯ ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಪಕ್ಷ ಮತ್ತು ಸರ್ಕಾರದಿಂದ ಪ್ರತ್ಯೇಕವಾದ ಅಹಿಂದ ಚಳುವಳಿಯನ್ನು ಮುನ್ನಡೆಸುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೂ, ಮುಖ್ಯಮಂತ್ರಿ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ನಾನು ಸಿಎಂ ಹುದ್ದೆ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಕೇಳಿಲ್ಲ ಮತ್ತು ಅವರು (ಯತೀಂದ್ರ) ಕೂಡ ಸಿಎಂ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಲಿಲ್ಲ ಎಂದು ಹೇಳಿದರು.
Rejecting speculations about a possible “November Revolution” and leadership change in the Congress, Minister Satish Jarkiholi asserted that the party high command will not allow any such rebellion in Karnataka.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm