ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm