ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am