ಬ್ರೇಕಿಂಗ್ ನ್ಯೂಸ್
28-10-25 10:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯ ಪೊಲೀಸ್ ಸಿಬ್ಬಂದಿಗೆ ದೇವರಾಜ ಅರಸು ಕಾಲದಲ್ಲಿ ನೀಡಲಾಗಿದ್ದ ಸ್ಲೋಚ್ ಮಾದರಿ ಕ್ಯಾಪ್ ಗಳನ್ನು ಬದಲಿಸಲಾಗಿದ್ದು ತೆಲಂಗಾಣ ಮಾದರಿಯಲ್ಲಿ ಬ್ಲೂ ಕ್ಯಾಪ್ ಗಳನ್ನು ವಿತರಣೆ ನೀಡಲಾಗಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೊಸ ಕ್ಯಾಪ್ಗಳ ವಿತರಣೆ ಮಾಡಿದರು.
ಕಳೆದ ಜೂನ್ ತಿಂಗಳಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಹೊಸ ಕ್ಯಾಪ್ ವಿತರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬಳಿಕ ಹಲವು ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಇರುವ ಕ್ಯಾಪ್ ಪರಿಶೀಲನೆ ನಡೆಸಲಾಗಿತ್ತು. ಕೊನೆಗೆ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ಬ್ಲೂ ಪೀಕ್ ಕ್ಯಾಪ್ ಅನ್ನು ಆಯ್ಕೆ ಮಾಡಿದ್ದು ಇದೀಗ ವಿತರಣೆ ಮಾಡಲಾಗಿದೆ.






ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ಇವತ್ತು ಪೊಲೀಸ್ ಇಲಾಖೆಯಲ್ಲಿ ಹೊಸ ಹೆಜ್ಜೆ ಇಡುತ್ತಿದ್ದೇವೆ. ಬ್ರಿಟಿಷರ ಕಾಲದಲ್ಲಿ ಪೊಲೀಸರಿಗೆ ನೀಡುತ್ತಿದ್ದ ಸಮವಸ್ತ್ರ ಮತ್ತು ಕ್ಯಾಪ್ ಗಳನ್ನು ಬದಲಾವಣೆ ಮಾಡಲಾಗಿದೆ. ಬ್ರಿಟಿಷ್ ಕಾಲದಲ್ಲಿ ಸ್ಲೋಪ್ ಟೋಪಿಗಳನ್ನು ಪೊಲೀಸ್ ಸಿಬ್ಬಂದಿ ಹಾಕುತ್ತಿದ್ದರು. ದೇವರಾಜ್ ಅರಸು ಸಿಎಂ ಆಗಿದ್ದಾಗ ನಮ್ಮ ಪೊಲೀಸ್ ಸಿಬ್ಬಂದಿಗೆ ಖಾಕಿ ಕ್ಯಾಪ್ ಹಾಕಿಸಿದ್ದರು. ಅಲ್ಲಿಂದ ಇಲ್ಲಿವರೆಗೆ ಅದನ್ನು ಹಾಕಿಕೊಳ್ಳುತ್ತಾ ಬಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಇದನ್ನು ಬದಲಾಯಿಸಲು ಇಲಾಖೆಯಿಂದ ಬೇಡಿಕೆ ಬಂದಿತ್ತು.
ಮಳೆಯಲ್ಲಿ ನೆನೆದರೆ ಖಾಕಿ ಕ್ಯಾಪ್ ಹೆಚ್ಚು ತೂಗುವುದರ ಜೊತೆಗೆ ಧರಿಸಲು ಕಷ್ಟ ಆಗುತ್ತದೆ. ನೋಡೋದಕ್ಕೂ ಚೆನ್ನಾಗಿಲ್ಲ ಎಂಬ ಒತ್ತಾಯವಿತ್ತು. ಹಿಂದೆ ಗೃಹ ಸಚಿವನಾಗಿದ್ದಾಗ ಕ್ಯಾಪ್ ಬದಲಾವಣೆ ಮಾಡುವ ಚಿಂತನೆ ಮಾಡಲಾಗಿತ್ತು. ಕೆಲವು ಕಾರಣಗಳಿಂದ ಬದಲಾವಣೆ ಮಾಡೋಕೆ ಆಗಿರಲಿಲ್ಲ. ಈಗ ಸಿಎಂ ಅವರೇ ಬ್ಲೂ ಕ್ಯಾಪ್ ಆಯ್ಕೆ ಮಾಡಿದ್ದು ಇಡೀ ರಾಜ್ಯದಲ್ಲಿ ವಿತರಣೆಗೆ ಅನುಮತಿ ನೀಡಿದ್ದಾರೆ ಎಂದರು.
The slouch-style caps introduced during the tenure of Devaraj Urs have now been replaced, and new blue caps, modeled after those worn by Telangana police, have been distributed to Karnataka police personnel.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm