ಬ್ರೇಕಿಂಗ್ ನ್ಯೂಸ್
30-10-25 04:34 pm Bangalore Correspondent ಕರ್ನಾಟಕ
ಬೆಂಗಳೂರು, ಅ.30 : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಾರೆ ಎಂದು ಘೋಷಿಸುವಂತೆ ಅಹಿಂದ ಸಂಘಟನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಒತ್ತಾಯಿಸಿವೆ.
ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳಿಗೆ ಅಂತ್ಯ ಹಾಡಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿವಿಧ ಅಹಿಂದ ಸಂಘಟನೆಗಳ ಪ್ರತಿನಿಧಿಗಳು ಬುಧವಾರ ಪತ್ರಗಳನ್ನು ಬರೆದಿದ್ದಾರೆ.
ನವೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಲಿದ್ದು ಇದೇ ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ನಗರದ ರಾಮಸ್ವಾಮಿ ವೃತ್ತದಲ್ಲಿರುವ ಅಂಚೆ ಪೆಟ್ಟಿಗೆ ಬಳಿ ಪತ್ರ ಚಳವಳಿ ನಡೆಸಿದವು. '2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಹಿಂದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ 135 ಸ್ಥಾನಗಳನ್ನು ಗೆದ್ದಿತ್ತು. ಇದು ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣವಾಯಿತು. ಈ ದೊಡ್ಡ ಮಟ್ಟದ ಗೆಲುವಿಗೆ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಅಹಿಂದ ಸಮುದಾಯಗಳ ಒಗ್ಗಟ್ಟು ಕಾರಣ' ಎಂದು ಅಹಿಂದ ಸಂಘಟನೆಗಳು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಿಳಿಸಿವೆ.
'ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಬಲಿಷ್ಠವಾಗಿದ್ದು, ಇದಕ್ಕೆ ಪ್ರಮುಖ ಕಾರಣ ಸಿದ್ದರಾಮಯ್ಯ ಅವರ ಆಡಳಿತ, ಜನಪರ ಖಾತರಿ ಯೋಜನೆ, ಅಹಿಂದ ಸಮುದಾಯಗಳ ಮೇಲಿನ ಅವರ ಪ್ರೀತಿ ಮತ್ತು ಕಾಳಜಿ, ಸಾಮಾಜಿಕ ನ್ಯಾಯದ ಸಿದ್ಧಾಂತ, ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಅವರ ಕೊಡುಗೆಗಳು ಮತ್ತು ಎಲ್ಲರಿಗೂ ಸಮಾನತೆಯ ತತ್ವದಲ್ಲಿ ಅವರ ನಂಬಿಕೆ' ಎಂದು ಅದು ಹೇಳಿದೆ.
Various AHINDA (Backward Classes, Dalits, and Minorities) organizations have written a letter to Congress leader Rahul Gandhi, urging him to officially declare Chief Minister Siddaramaiah as the head of the Karnataka government for the entire five-year term.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am