ಬ್ರೇಕಿಂಗ್ ನ್ಯೂಸ್
30-10-25 06:22 pm HK News Desk ಕರ್ನಾಟಕ
ಕಲಬುರ್ಗಿ, ಅ.30 : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನ ಕುರಿತ ರಿಟ್ ಅರ್ಜಿ ಬಗ್ಗೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಅ.28ರಂದು ನಡೆದ ಶಾಂತಿಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಭದ್ರತೆ ಏರ್ಪಡಿಸಲು ಮತ್ತು ಸಂಘಟನೆಗಳ ಜೊತೆ ಮಾತುಕತೆ ನಡೆಸಲು ನ.5ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಳಿಕೊಂಡಿದ್ದು ಇದರಂತೆ ಹೈಕೋರ್ಟ್ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು ಅದಕ್ಕೆ ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೊನ್ನೆಯ ಶಾಂತಿ ಸಭೆಗೆ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ. ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಆಕ್ಷೇಪ ಸಲ್ಲಿಸಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅರುಣ್ ಶ್ಯಾಮ್ ತಿಳಿಸಿದರು.
ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದ್ದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರರು ಬರಲಾಗದಿದ್ದರೆ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು ಅರ್ಹತೆ ಮೇಲೆ ವಾದ ಮಂಡಿಸಿ. ಯಾರಿಗೆ ವಿಚಾರ ಗೊತ್ತಿರುತ್ತದೆ, ಅವರೇ ಶಾಂತಿ ಸಭೆಗೆ ಹಾಜರಾಗಬೇಕಿತ್ತು. ನಾವು ಹೇಳಿದ್ದಕ್ಕೂ ಒಂದು ಕಾರಣವಿರುತ್ತದೆ ಎಂದು ತಿಳಿಯಬೇಕಿತ್ತು ಎಂದು ಜಡ್ಜ್ ತಿಳಿಸಿದರು.
ಅರ್ಜಿದಾರರ ಪರ ವಕೀಲರಿಗೆ ಆಹ್ವಾನವಿರಲಿಲ್ಲ. ಮತ್ತೊಂದು ಸಭೆ ನಡೆಸಿದರೆ ಹಾಜರಾಗುತ್ತೇವೆ ಎಂದು ಅರುಣ್ ಶಾಮ್ ತಿಳಿಸಿದರು. ಆಗ ಎಜಿ ಶಶಿಕಿರಣ್ ಶೆಟ್ಟಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಸಿದ್ಧರಿದ್ದೇವೆ. ಸಮಸ್ಯೆ ಬಗೆಹರಿಸುವುದಷ್ಟೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ನವೆಂಬರ್ 5 ರಂದು ಮತ್ತೆ ಶಾಂತಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
The Kalaburagi Bench of the Karnataka High Court heard a writ petition related to the RSS (Rashtriya Swayamsevak Sangh) Path Sanchalan in Chittapur. The court noted that a final decision could not be reached during the peace meeting held on October 28.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm