ಬ್ರೇಕಿಂಗ್ ನ್ಯೂಸ್
30-10-25 06:22 pm HK News Desk ಕರ್ನಾಟಕ
ಕಲಬುರ್ಗಿ, ಅ.30 : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನ ಕುರಿತ ರಿಟ್ ಅರ್ಜಿ ಬಗ್ಗೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಅ.28ರಂದು ನಡೆದ ಶಾಂತಿಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಭದ್ರತೆ ಏರ್ಪಡಿಸಲು ಮತ್ತು ಸಂಘಟನೆಗಳ ಜೊತೆ ಮಾತುಕತೆ ನಡೆಸಲು ನ.5ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಳಿಕೊಂಡಿದ್ದು ಇದರಂತೆ ಹೈಕೋರ್ಟ್ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು ಅದಕ್ಕೆ ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೊನ್ನೆಯ ಶಾಂತಿ ಸಭೆಗೆ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ. ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಆಕ್ಷೇಪ ಸಲ್ಲಿಸಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅರುಣ್ ಶ್ಯಾಮ್ ತಿಳಿಸಿದರು.
ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದ್ದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರರು ಬರಲಾಗದಿದ್ದರೆ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು ಅರ್ಹತೆ ಮೇಲೆ ವಾದ ಮಂಡಿಸಿ. ಯಾರಿಗೆ ವಿಚಾರ ಗೊತ್ತಿರುತ್ತದೆ, ಅವರೇ ಶಾಂತಿ ಸಭೆಗೆ ಹಾಜರಾಗಬೇಕಿತ್ತು. ನಾವು ಹೇಳಿದ್ದಕ್ಕೂ ಒಂದು ಕಾರಣವಿರುತ್ತದೆ ಎಂದು ತಿಳಿಯಬೇಕಿತ್ತು ಎಂದು ಜಡ್ಜ್ ತಿಳಿಸಿದರು.
ಅರ್ಜಿದಾರರ ಪರ ವಕೀಲರಿಗೆ ಆಹ್ವಾನವಿರಲಿಲ್ಲ. ಮತ್ತೊಂದು ಸಭೆ ನಡೆಸಿದರೆ ಹಾಜರಾಗುತ್ತೇವೆ ಎಂದು ಅರುಣ್ ಶಾಮ್ ತಿಳಿಸಿದರು. ಆಗ ಎಜಿ ಶಶಿಕಿರಣ್ ಶೆಟ್ಟಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಸಿದ್ಧರಿದ್ದೇವೆ. ಸಮಸ್ಯೆ ಬಗೆಹರಿಸುವುದಷ್ಟೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ನವೆಂಬರ್ 5 ರಂದು ಮತ್ತೆ ಶಾಂತಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
The Kalaburagi Bench of the Karnataka High Court heard a writ petition related to the RSS (Rashtriya Swayamsevak Sangh) Path Sanchalan in Chittapur. The court noted that a final decision could not be reached during the peace meeting held on October 28.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am