ಬ್ರೇಕಿಂಗ್ ನ್ಯೂಸ್
01-11-25 09:33 pm HK News Desk ಕರ್ನಾಟಕ
ಕಲಬುರಗಿ, ನ.1 : ಆರೆಸ್ಸೆಸ್ ನವರಷ್ಟು ಹೇಡಿಗಳು ಯಾರೂ ಇಲ್ಲ. ಅವರು ಯಾಕೆ ಇನ್ನೂ ರಿಜಿಸ್ಟ್ರೇಷನ್ ಮಾಡುತ್ತಿಲ್ಲ? ನೂರು ವರ್ಷ ಹೀಗೆ ಮುಂದುವರೆಸಿದ್ದಾರೆ ಅಂತ 101ನೇ ವರ್ಷವೂ ಹಾಗೆ ಬಿಡಲು ಆಗುತ್ತಾ ? ಪ್ರಧಾನಿ ಮೋದಿ ಆರೆಸ್ಸೆಸ್ ಅತಿದೊಡ್ಡ ಎನ್ ಜಿಓ ಅಂತ ಹೇಳುತ್ತಾರೆ, ಹಾಗಾದ್ರೆ ಅದರ ಬಗ್ಗೆ ಲೆಕ್ಕಪತ್ರ ಕೇಳಬಾರದಾ ಎಂದು ಸಚಿವ ಪ್ರಿಯಾಂಕ ಖರ್ಗೆ ಮತ್ತೆ ಪ್ರಶ್ನೆ ಮಾಡಿದ್ದಾರೆ.
ಅಂಬೇಡ್ಕರ್ ತಮ್ಮ ಕೊನೆಯ ಭಾಷಣದಲ್ಲಿ ಯಾರ್ಯಾರು ದೇಶದ್ರೋಹಿಗಳು ಎನ್ನುವ ಬಗ್ಗೆ
ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತಿ ಜಾತಿಗಳ ನಡುವೆ ಜಗಳ ಹಚ್ಚುವವರು, ಕೋಮುವಾದಿಗಳು, ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ದೂರ ಇಡ್ತಾರೆ. ಅಂತಹ ತತ್ವ ಸಿದ್ಧಾಂತಗಳು, ಸಂಘಟನೆಗಳು ದೇಶದ್ರೋಹಿಗಳು ಎಂದಿದ್ದಾರೆ. ಈಗಿನ ಸಂದರ್ಭದಲ್ಲಿ ಕೋಮು ವಿಷ ಬಿತ್ತುತ್ತಿರುವುದು ಯಾರು? ಅದು ಯಾರೇ ಇರಲಿ, ಯಾವುದೇ ಸಂಘಟನೆಗಳಿರಲಿ, ಯಾವುದೇ ಧರ್ಮಕ್ಕೆ ಸೇರಿದವರಾಗಿರಲಿ ಎಲ್ಲರನ್ನು ನಿಷೇಧ ಮಾಡಬೇಕು. ಜನರ ಆರ್ಥಿಕ ಸಾಮಾಜಿಕ ಅಭಿವೃದ್ಧಿಗೆ ಹಿನ್ನಡೆ ಆಗುವಂತಹ ತತ್ವಗಳು ಇರಬಾರದು.
ಸರ್ದಾರ್ ವಲ್ಲಭಭಾಯಿ ಪಟೇಲರು ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಬ್ಯಾನ್ ಮಾಡಿದ್ದರು. ನಂತರ ಅವರ ಕಾಲಿಗೆ ಬಿದ್ದು ನಾವು ರಾಷ್ಟ್ರಧ್ವಜಕ್ಕೆ ತಲೆಬಾಗ್ತೀವಿ ಅಂತ ಹೇಳಿ ನಿಷೇಧ ಹಿಂಪಡೆದುಕೊಂಡರು. ಈ ವಿಚಾರದಲ್ಲಿ ನಮ್ಮ ಪಕ್ಷದ ಸಿದ್ಧಾಂತ ಬಹಳ ಸ್ಪಷ್ಟವಾಗಿದೆ. ಮನುಸ್ಮೃತಿ ನಮ್ಮ ಸಂವಿಧಾನ ಆಗಬೇಕು ಎನ್ನುವುದು ಅವರ ಗುರಿ. ಹಾಗಾದ್ರೆ ಅದನ್ನು ಒಬ್ಬರಾದ್ರೂ ತಮ್ಮ ಮನೆಗಳಲ್ಲಿ ಏಕೆ ಪಾಲನೆ ಮಾಡುತ್ತಿಲ್ಲ ಹೇಳಲಿ. ಪ್ರಶ್ನೆ ಇರುವುದು ಬರೀ ಪಥ ಸಂಚಲನ ವಿಚಾರದ್ದು ಅಲ್ಲ. ಆರೆಸ್ಸೆಸ್ ಕಚೇರಿಗಳಿವೆ, ವಾಹನಗಳಿವೆ, ಮೋಹನ್ ಭಾಗ್ವತ್ ಅವರಿಗೆ ಸೆಕ್ಯೂರಿಟಿ ಕೊಟ್ಟಿದ್ದೀರಿ. ನಮ್ಮ ನಾಗರಿಕರ ತೆರಿಗೆ ಅವರ ಸೆಕ್ಯೂರಿಟಿಗೆ ಖರ್ಚು ಮಾಡುತ್ತಿದ್ದೀರಿ, ಯಾಕೆ ಖರ್ಚು ಮಾಡುತ್ತಿದ್ದೀರಿ ಅಂತ ಕೇಳಬಾರದಾ?
ನಾವು ನಮ್ಮ ಆಸ್ತಿ ವಿವರದ ಅಫಿಡವಿಟ್ ಸಲ್ಲಿಸದಿದ್ದರೆ ನೀವೇ ಪ್ರಶ್ನೆ ಮಾಡುತ್ತೀರಿ. ಯಾವುದೇ ರಿಜಿಸ್ಟರ್ ಏನ್ ಜಿಓಗೆ ದೇಣಿಗೆ ಎಲ್ಲಿಂದ ಬರುತ್ತೆ ಅಂತ ಕೇಳಲಾಗುತ್ತದೆ. ಆರ್ ಎಸ್ ಎಸ್ ನವರಿಗೆ ಯಾಕೆ ಈ ಮಾನದಂಡ ಇಲ್ಲ. ವಿದೇಶದಿಂದ ಸ್ವಯಂಸೇವಕರಿಗೆ ದುಡ್ಡು ಬರುತ್ತೆ ಅಂತಿದಾರೆ. ಹಾಗಾದ್ರೆ ಯಾರ್ ಕೊಡ್ತಾ ಇದ್ದಾರೆ ? ಯಾರ್ ತಗೋತಾ ಇದ್ದಾರೆ ? ಯಾವುದಕ್ಕೆ ಖರ್ಚು ಮಾಡ್ತಾ ಇದ್ದಾರೆ ? ಯಾರಿಗೂ ಗೊತ್ತಿಲ್ಲ. ಪ್ರಧಾನಿ ಮೋದಿ ಇದು ವಿಶ್ವದ ದೊಡ್ಡ ಎನ್ ಜಿಓ ಎಂದು ಕೆಂಪುಕೋಟೆಯಲ್ಲಿ ಹೇಳುತ್ತಾರೆ. ವಿಶ್ವದ ದೊಡ್ಡ ಸಂಘಟನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಗೊತ್ತಾಗುವುದು ಬೇಡವಾ? ಇದನ್ನು ಕೇಳುವುದು ನಮ್ಮ ನಿಮ್ಮ ಹಕ್ಕಲ್ಲವಾ ? ಎಂದು ಪ್ರಶ್ನಿಸಿದ್ದಾರೆ.
Minister Priyank Kharge has once again launched a sharp attack on the Rashtriya Swayamsevak Sangh (RSS), questioning why the organization has not been registered even after a century of existence.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm