ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆಂಗಳೂರಿನ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲು 

02-11-25 11:09 pm       HK News Desk   ಕರ್ನಾಟಕ

ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಕರ್ನಾಟಕದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲಾಗಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. 

ಕಣ್ಣೂರು, ನ.2 : ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಕರ್ನಾಟಕದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲಾಗಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. 

ಮೃತರನ್ನು ಹಾಸನ ಮೂಲದ ಅಫ್ನಾನ್, ರಹಾನುದ್ದೀನ್ ಮತ್ತು ಅಫ್ರಾಜ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಹನ್ನೊಂದು ಜನ ಸ್ನೇಹಿತರೊಂದಿಗೆ ಇವರು ಪಿಕ್ನಿಕ್ ಬಂದಿದ್ದು ಬೀಚ್ ಹತ್ತಿರದ ರೆಸಾರ್ಟ್ ನಲ್ಲಿ ತಂಗಿದ್ದರು. ಭಾನುವಾರ ಸಂಜೆ ಐದು ವಿದ್ಯಾರ್ಥಿಗಳು ಈಜಲು ಹೋಗಿದ್ದರು, ಅವರಲ್ಲಿ ಮೂವರು ಸಮುದ್ರಪಾಲಾಗಿದ್ದಾರೆ. ವಿದ್ಯಾರ್ಥಿಗಳನ್ನು ತಕ್ಷಣವೇ ಮೀನುಗಾರರು ರಕ್ಷಿಸಿ ಆಸ್ಪತ್ರೆಗೆ  ಸಾಗಿಸಿದ್ದರು. ಆದರೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

In a tragic incident, three medical students from Bengaluru drowned while swimming at Payyambalam Beach in Kerala’s Kannur district on Sunday evening.  The deceased have been identified as Afnan, Rahanuddin, and Afraz, all natives of Hassan district, Karnataka. The trio were students of a medical college in Bengaluru.