ಬ್ರೇಕಿಂಗ್ ನ್ಯೂಸ್
06-11-25 03:06 pm Bangalore Correspondent ಕರ್ನಾಟಕ
ಬೆಂಗಳೂರು, ನ.6 : ಹೆಸರಾಂತ ಪೋಷಕ ನಟ, ಕನ್ನಡ ಚಿತ್ರಗಳಲ್ಲಿ ವಿಲನ್ ಪಾತ್ರಗಳ ಮೂಲಕ ಮಿಂಚಿದ್ದ ಹಿರಿಯ ನಟ ಹರೀಶ್ ರಾಯ್(55) ಥೈರಾಯ್ಡ್ ಕ್ಯಾನ್ಸರ್ನಿಂದಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಉಡುಪಿ ಮೂಲದ ಹರೀಶ್ ರಾಯ್, ಶಿವರಾಜ್ ಕುಮಾರ್ ನಟನೆಯ ಓಂ ಚಿತ್ರದಲ್ಲಿ ಡಾನ್ ಆಗಿ, ಕೆಜಿಎಫ್ ಚಿತ್ರದಲ್ಲಿ ಚಾಚಾನಾಗಿ ಹೆಸರು ಮಾಡಿದ್ದರು. ಇತ್ತೀಚೆಗೆ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಶಿವಣ್ಣ, ಯಶ್ ಸೇರಿದಂತೆ ಅನೇಕರು ಆರ್ಥಿಕ ನೆರವು ನೀಡಿದ್ದರು. ಕೊನೆಗೂ ಕ್ಯಾನ್ಸರ್ ವಿರುದ್ಧ ಗೆಲ್ಲಲು ಹರೀಶ್ ರಾಯ್ ಅವರಿಗೆ ಸಾಧ್ಯವಾಗಲಿಲ್ಲ.


90 ರ ದಶಕದಲ್ಲಿ ಕನ್ನಡ, ತಮಿಳಿನ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ, ಮೀಂದುಮ್ ಒರು ಕಾದಲ್ ಕಥೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕ್ಯಾನ್ಸರ್ ವಿರುದ್ಧ ಹೋರಾಡಲು ಅವರಿಗೆ ದುಬಾರಿ ಬೆಲೆಯ 17 ಇಂಜೆಕ್ಷನ್ಗಳ ಅವಶ್ಯಕತೆ ಇತ್ತು. ಅದಕ್ಕಾಗಿ ಸುಮಾರು 70 ಲಕ್ಷಕ್ಕೂ ಅಧಿಕ ರೂ. ಅಗತ್ಯವಿತ್ತು ಎನ್ನಲಾಗಿತ್ತು. ಒಂದು ಇಂಜೆಕ್ಷನ್ ಬೆಲೆ 3.50 ಲಕ್ಷ ರೂ. ಎಂದೂ ಹೇಳಲಾಗಿತ್ತು. ಅವರಿಗೆ ಇತ್ತೀಚೆಗೆ ಒಂದು ಇಂಜೆಕ್ಷನ್ ನೀಡಲಾಗಿತ್ತು. ಆದರೆ ಇಂಜೆಕ್ಷನ್ಗೆ ಅವರ ದೇಹ ಸಹಕರಿಸದೇ ಇದ್ದುದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನ ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Veteran Kannada actor Harish Rai (55), who gained fame for his villainous roles in films like Om and KGF, passed away in Bengaluru after battling thyroid cancer. The actor was undergoing treatment at Kidwai Memorial Institute of Oncology.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm