ಬ್ರೇಕಿಂಗ್ ನ್ಯೂಸ್
06-11-25 07:34 pm Bangalore Correspondent ಕರ್ನಾಟಕ
ಬೆಂಗಳೂರು, ನ.6 : ರಸ್ತೆಗಳು, ಉದ್ಯಾನವನಗಳು ಮತ್ತು ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಹೆಚ್ಚು ಜನರು ಅನಧಿಕೃತವಾಗಿ ಗುಂಪು ಸೇರುವುದನ್ನು ನಿರ್ಬಂಧಿಸುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ತಡೆಯಾಜ್ಞೆಯನ್ನು ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ.
ರಾಜ್ಯ ಸರ್ಕಾರದ ಮೇಲ್ಮನವಿಗೆ ನ್ಯಾಯಮೂರ್ತಿಗಳಾದ ಎಸ್.ಜಿ ಪಂಡಿತ್ ಮತ್ತು ಗೀತಾ ಕೆ.ಬಿ ಅವರ ನೇತೃತ್ವದ ವಿಭಾಗೀಯ ಪೀಠವು ಇತ್ತೀಚೆಗೆ ಏಕ ನ್ಯಾಯಾಧೀಶರು ನೀಡಿದ ತಡೆಯಾಜ್ಞೆಯಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದು ತಡೆಯಾಜ್ಞೆಯನ್ನು ತೆಗೆದುಹಾಕಲು ಮತ್ತೆ ಹಿಂದಿನ ನ್ಯಾಯಾಧೀಶರನ್ನು ಸಂಪರ್ಕಿಸುವಂತೆ ಸಲಹೆ ಮಾಡಿದೆ.
ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಮೇಲ್ಮನವಿ ಸಲ್ಲಿಸುವವರು ಅರ್ಜಿ ಸಲ್ಲಿಸಬಹುದು. ಎಲ್ಲಾ ವಾದಗಳನ್ನು ಮುಕ್ತವಾಗಿ ಬಿಡಲಾಗಿದೆ ಎಂದು ವಿಭಾಗೀಯ ಪೀಠವು ಹೇಳಿದ್ದು ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯವನ್ನು ಪ್ರತಿನಿಧಿಸುವ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಏಕ ನ್ಯಾಯಾಧೀಶರ ಆದೇಶದ ಕಾರ್ಯಾಚರಣೆಯನ್ನು ಕೇವಲ ಸರ್ಕಾರದ ಆದೇಶ ಪ್ರಶ್ನಿಸಿದ ಅರ್ಜಿದಾರರಿಗೆ ಮಾತ್ರ ಸೀಮಿತಗೊಳಿಸಲು ಆದೇಶಗಳನ್ನು ಹೊರಡಿಸುವುದನ್ನು ಪರಿಗಣಿಸುವಂತೆ ಪೀಠವನ್ನು ಒತ್ತಾಯಿಸಿದರು. ಆದರೆ ವಿಭಾಗೀಯ ಪೀಠವು ಮನವಿ ಒಪ್ಪಿಕೊಳ್ಳಲು ನಿರಾಕರಿಸಿತು.
ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾರ್ವಜನಿಕ ಕಾರ್ಯ ಚಟುವಟಿಕೆ ಹತ್ತಿಕ್ಕುವ ಸಲುವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮ ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ 'ಪುನಶ್ಚೇತನ ಸೇವಾ ಸಂಸ್ಥೆ, 'ವೀ ಕೇರ್ ಫೌಂಡೇಶನ್', ಮತ್ತು ಧಾರವಾಡದ ರಾಜೀವ್ ಮಲ್ಹಾರ್ ಪಾಟೀಲ್ ಕುಲಕರ್ಣಿ ಮತ್ತು ಬೆಳಗಾವಿಯ ಸಮಾಜ ಸೇವಕಿ ಉಮಾ ಸತ್ಯಜಿತ್ ಚವಾಣ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ನಿರ್ಧಾರವು ಶಾಂತಿಯುತ ಸಭೆ ಸೇರುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆಕ್ಷೇಪಿಸಿದ್ದರು. ಬಳಿಕ ರಾಜ್ಯ ಸರ್ಕಾರದ ಆದೇಶಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿತ್ತು.
The Karnataka High Court has refused to vacate the interim stay on the state government’s order that banned private organizations from holding events or gatherings in public places such as roads, parks, and playgrounds — marking another setback for the government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am