ಬ್ರೇಕಿಂಗ್ ನ್ಯೂಸ್
29-12-20 12:36 am Bangalore Correspondent ಕರ್ನಾಟಕ
ಬೆಂಗಳೂರು (ಡಿ. 29): ರೋನಾ ವರ್ಷಕ್ಕೆ ಗುಡ್ ಬೈ ಹೇಳಿ 2021 ಹೊಸ ವರ್ಷವನ್ನು ಸ್ವೀಕರಿಸುವ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕರೋನಾ ರೂಪಾಂತರ ಅಲೆ ಇರುವ ಹಿನ್ನೆಲೆಯಲ್ಲಿ ಸುರಕ್ಷತಾ ಭಾಗವಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಾತ್ರಿ 8 ರಿಂದ ಮರು ದಿನ ಬೆಳಗ್ಗೆ 6 ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಅನ್ವಯ ವಾಗುವಂತೆ ಆದೇಶ ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶ ಮಾಡಿದ್ದಾರೆ.
ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ತಿಳಿಸಿದರು.
ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್ಗಳಲ್ಲಿ ಈವೆಂಟ್, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
There will be no public New Year celebrations in Bengaluru involving large groups as the city police have announced curfew on New Year’s Eve. The move was announced by Bengaluru Police Commissioner Kamal Pant who said that Section 144 of CRPC would be imposed across the city in the light of the Covid-19 pandemic.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm