ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am