ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm