ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm