ಬ್ರೇಕಿಂಗ್ ನ್ಯೂಸ್
29-12-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.29: ಮಕರ ಸಂಕ್ರಮಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ನೀಡಿದ್ದ ಹೇಳಿಕೆಗೆ ಪೂರಕವಾಗಿ ಮತ್ತಿಬ್ಬರು ನಾಯಕರು ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ನೀಡಿದ ಹೇಳಿಕೆ ಈಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ. ಹಾಗೆಯೇ ಬಿಜೆಪಿಯ ಕೆಲ ಶಾಸಕರ ಶಾಪವೂ ಇದೆ. ಈ ಕಾರಣಕ್ಕೆ ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಿಕಾರದಲ್ಲಿ ಇರುವುದಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತೋ ಇಲ್ಲವೋ.. ಎಂದು ಹೇಳುತ್ತಿಲ್ಲ. ಆದರೆ, ತನಗೆ ಬಂದ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನ ಕೆಳಗಿಳಿಸಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ. ಜನವರಿ 16ರ ನಂತರ ಅವರು ಅಧಿಕಾರದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಸಿಗಂದೂರು ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಯಡಿಯೂರಪ್ಪ ಅವರು ದೇವಿಯ ಶಾಪಕ್ಕೆ ತುತ್ತಾಗಿದ್ಧಾರೆ. ಹೀಗಾಗಿಯೇ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಶನ್ ಪ್ರಕರಣ ಬಂದಿದೆ. ಇದು ದೇವಿಯ ಶಾಪ ತಟ್ಟಿರುವುದಕ್ಕೆ ಸಾಕ್ಷಿ. ನಾನು ಯಡಿಯೂರಪ್ಪ ಅವರ ರಾಜೀನಾಮೆ ಕೇಳುವುದಿಲ್ಲ. ಯಡಿಯೂರಪ್ಪ ಬಗ್ಗೆ ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕರೂ ಆಗಿರುವ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಹೇಳಿಕೆ ನೀಡಿದ್ದು ನಾಯಕತ್ವ ಬದಲಾವಣೆಯ ಸುಳಿವನ್ನು ನೀಡಿದ್ದಾರೆ. ದತ್ತಮಾಲ ಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿಯಾಗಿ ಭಿಕ್ಷಾಟನೆ ಹೊರಡುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ರಾಜಕಾರಣದಲ್ಲಿ ಎಲ್ಲವೂ ಇರುತ್ತೆ. ಸದ್ದುಗದ್ದಲ ಇಲ್ಲದಿದ್ದರೆ ಜಾತ್ರೆ ಆಗಲ್ಲ ಎಂದು ಸಿ.ಟಿ. ರವಿ ಹೇಳಿದ್ಧಾರೆ. ಯತ್ನಾಳ್ ಹೇಳಿಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿ.ಟಿ. ರವಿ ಈ ರೀತಿ ಪ್ರತಿಕ್ರಿಯೆ ನೀಡಿದ್ದು ಕುತೂಹಲ ಮೂಡಿಸಿದೆ.
ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಬಿಜೆಪಿ ನಾಯಕರು ಎಷ್ಟೇ ಹೇಳಿಕೊಂಡರೂ, ಒಳಗಿಂದೊಳಗೆ ಸಿಎಂ ಪದಚ್ಯುತಿಗೆ ಪ್ರಯತ್ನಗಳು ನಡೆಯುತ್ತಲೇ ಇದೆ. ಸಂಕ್ರಾಂತಿ ವೇಳೆಗೆ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು ಎಂಬ ಲೆಕ್ಕಾಚಾರವನ್ನು ಯಡಿಯೂರಪ್ಪ ವಿರೋಧಿಗಳು ಮಾಡುತ್ತಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm