ಬ್ರೇಕಿಂಗ್ ನ್ಯೂಸ್
16-11-25 09:15 pm HK News Desk ಕರ್ನಾಟಕ
ಕಲಬುರಗಿ, ನ.16 : ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನ ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಭಗವಾಧ್ವಜ ಹಾರಿಸಿ ಆರ್ಎಸ್ಎಸ್ ಕಾರ್ಯಕರ್ತರು ಒಂದೂವರೆ ಕಿಮೀ ರಸ್ತೆಯುದ್ದಕ್ಕು ಹೆಜ್ಜೆ ಹಾಕಿದರು.
ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ, ಎಚ್ಡಿಎಫ್ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಪಥಸಂಚಲನ ಮುಕ್ತಾಯವಾಯಿತು. ಹೈಕೋರ್ಟ್ ಆದೇಶದಂತೆ 300 ಜನ ಗಣವೇಷಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು.



ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು. ರಸ್ತೆಯ ಎರಡೂ ಬದಿಯಲ್ಲಿ ನಿಂತು ಗಣವೇಷಧಾರಿಗಳ ಮೇಲೆ ಹೂವಿನ ಮಳೆ ಸುರಿಸಿದರು. ಮಧ್ಯಾಹ್ನ 3:45ಕ್ಕೆ ಆರಂಭವಾದ ಪಥ ಸಂಚಲನ 4:22ಕ್ಕೆ ಕೊನೆಗೊಂಡಿತು. ಸುಮಾರು 47 ನಿಮಿಷ ಕಾಲ ಒಟ್ಟು 1.25 ಕಿ.ಮೀ ಉದ್ದಕ್ಕೆ ಮಾರ್ಚ್ ನಡೆಯಿತು.
ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್, ಕೆಎಸ್ಆರ್ಪಿ ಡಿಎಆರ್ ತುಕಡಿ ಸೇರಿದಂತೆ 650 ಪೋಲಿಸರು, 250 ಜನ ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು. ಪುರಸಭೆಯಿಂದ 12 ಹಾಗೂ ಪೋಲಿಸ್ ಇಲಾಖೆಯಿಂದ 44 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. 5 ಡ್ರೋಣ್ ಕ್ಯಾಮೆರಾ ಮೂಲಕ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿತ್ತು. ಚಿತ್ತಾಪುರ ಹೊರತುಪಡಿಸಿ ಬೇರೆ ಕಡೆಯಿಂದ ಆಗಮಿಸಿದ ಕಾರ್ಯಕರ್ತರಿಗೆ ಪಥಸಂಚಲನದಲ್ಲಿ ಭಾಗಿಯಾಗಲು ಪೊಲೀಸರು ಅವಕಾಶ ನೀಡಲಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ ಖರ್ಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ, ನಮ್ಮಿಂದಾಗಿ ಆರೆಸ್ಸೆಸ್ ಕಾನೂನು ಪ್ರಕಾರ ಅನುಮತಿ ಪಡೆದು ರೂಟ್ ಮಾರ್ಚ್ ನಡೆಸುವಂತಾಯ್ತು. ನೂರು ವರ್ಷದಲ್ಲಿ ಅವರು ಸಂವಿಧಾನ ಪಾಲಿಸಿರಲಿಲ್ಲ. ಈಗ ಕಾನೂನು ಪಾಲನೆ ಮಾಡ್ತಾ ಇದ್ದಾರೆ. ನಾವೇ ಪರ್ಮಿಶನ್ ಕೊಟ್ಟಿದ್ದು. ನಾವೇನು ಆರೆಸ್ಸೆಸ್ ಪಥಸಂಚಲನಕ್ಕೆ ವಿರೋಧ ಮಾಡಿರಲಿಲ್ಲ. ಸಂವಿಧಾನ ಪಾಲನೆ ಮಾಡಲಷ್ಟೇ ಹೇಳಿದ್ದೆವು ಎಂದು ಹೇಳಿ ತನ್ನ ನಡೆಯನ್ನು ಸಮರ್ಥನೆ ಮಾಡಿದ್ದಾರೆ.
The much-debated and highly controversial RSS route march in Chittapur, which had created political tremors across Karnataka, was finally conducted successfully today. In IT/BT Minister Priyank Kharge’s home turf, RSS workers marched for about 1.5 km holding saffron flags.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am