ಬ್ರೇಕಿಂಗ್ ನ್ಯೂಸ್
22-11-25 08:03 pm HK News Desk ಕರ್ನಾಟಕ
ಹುಬ್ಬಳ್ಳಿ, ನ.22: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ಕಾಂಗ್ರೆಸ್ ಶಾಸಕರ 'ಕುದುರೆ ವ್ಯಾಪಾರ'ಕ್ಕೆ ಕಾರಣವಾಗಿದೆ. ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ಕೆ.ಸಿ. ವೀರೇಂದ್ರ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಕೇಳಿಕೊಳ್ಳುವಷ್ಟರ ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, "ಕಾಂಗ್ರೆಸ್ನಲ್ಲಿ ಒಳ ಜಗಳ ಜೋರಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲು ಬಯಸುವುದಿಲ್ಲ. ಆದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದನ್ನು ಶಿವಕುಮಾರ್ ಇಷ್ಟಪಡುವುದಿಲ್ಲ ಎಂದರು. ಇಂತಹ ಪರಿಸ್ಥಿತಿಯಿಂದಾಗಿ, ಎರಡೂ ಬಣಗಳು ಈಗ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿವೆ. ಶಾಸಕರ ಬೆಂಬಲ ಪಡೆಯಲು ಮತ್ತು ಅವರಿಗೆ ಹಣ ಪಾವತಿಸಲು ಶಿವಕುಮಾರ್ ಜೈಲಿಗೆ ಹೋಗಿರುವುದನ್ನು ನೀವು ನೋಡಿರಬಹುದು ಎಂದು ವಾಗ್ದಾಳಿ ನಡೆಸಿದರು.
ಶಾಸಕರ "ಕುದುರೆ ವ್ಯಾಪಾರ" ನಡೆಯುತ್ತಿರುವ ಹಂತಕ್ಕೆ ಕಾಂಗ್ರೆಸ್ ಪರಿಸ್ಥಿತಿ ತಲುಪಿದೆ. ಅಧಿಕಾರಕ್ಕಾಗಿ ಇವರು ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಂತಹ ನಗರದಲ್ಲಿ ಹಾಡಹಗಲೇ ದರೋಡೆಗಳು ನಡೆಯುತ್ತಿವೆ. ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಐದು ವರ್ಷ ಆಡಳಿತ ಮಾಡಲು ಜನ ಬಹುಮತ ನೀಡಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ಸಿಗರ ಜೊತೆಗೆ ಸರ್ಕಾರ ರಚಿಸುವ ಇಂಗಿತ ನಮ್ಮ ಪಕ್ಷಕ್ಕೆ ಇಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಪರಿಸ್ಥಿತಿ ಭಿನ್ನವಾಗಿದೆ. ಹೀಗಾಗಿ ಕಾಂಗ್ರೆಸ್ ನಿಂದ ಹೊರ ಬರುವವರ ಜೊತೆ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬುದು ದೂರದ ಮಾತು ಎಂದು ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Union Minister Pralhad Joshi has alleged that the ongoing power struggle within the Karnataka Congress has led to intense “horse-trading” among MLAs. Speaking in Hubballi, he said that Deputy Chief Minister D.K. Shivakumar visiting imprisoned Congress MLAs Vinay Kulkarni and K.C. Virendra in Bengaluru Central Jail to seek their support is disgraceful and highlights the deep internal conflict in the party.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm