ಬ್ರೇಕಿಂಗ್ ನ್ಯೂಸ್
24-11-25 09:55 pm Bangalore Correspondent ಕರ್ನಾಟಕ
ಬೆಂಗಳೂರು, ನ.24 : ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು. ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷವನ್ನು ತಲುಪಿದ ನಂತರ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ವದಂತಿ ನಡುವೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ನಾನೇ ಇರಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾವು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ ಎಂದು ಗರಂ ಆದರು. ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು.
ಎರಡೂವರೆ ವರ್ಷಗಳಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದಷ್ಟೇ ಹೇಳಿದರು.
Chief Minister Siddaramaiah said on Monday that any decision regarding a change in leadership will be made by the Congress High Command. He added, “Whatever decision the High Command takes, both I and D.K. Shivakumar must accept it. If the High Command decides that I should continue in the post, I will continue.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am