ಬ್ರೇಕಿಂಗ್ ನ್ಯೂಸ್
27-11-25 11:55 am Bangalore Correspondent ಕರ್ನಾಟಕ
ಬೆಂಗಳೂರು, ನ 27 : ರಾಜ್ಯ ರಾಜಕೀಯದಲ್ಲಿ ಮತ್ತೆ ‘ಕುರ್ಚಿ’ಯ ಕನವರಿಕೆ ಶುರುವಾಗಿದೆ. ಇದೇ ಹೊತ್ತಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ನೀಡಿದ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವರ್ಡ್ ಪವರ್ ಈಸ್ ವರ್ಲ್ಡ್ ಪವರ್' (ಮಾತಿನ ಶಕ್ತಿಯೇ ವಿಶ್ವದ ಶಕ್ತಿ) ಎಂದು ಡಿಕೆಶಿ ಹೇಳುವ ಮೂಲಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಹಳೆಯ ಒಪ್ಪಂದವನ್ನು ನೆನಪಿಸಿದ್ದಾರೆ ಎಂಬ ವಿಶ್ಲೇಷಣೆಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಆದರೆ, ಕಾಂಗ್ರೆಸ್ ನಾಯಕರ ನಡುವೆ ನಡೆದಿದೆ ಎನ್ನಲಾದ ಆ ಒಪ್ಪಂದವಾದರೂ ಏನು? ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದ ಮಾತು ಏನು? ಈ ಮಾತು ಕೊಟ್ಟವರು ಯಾರು? ಈ ಯಾವೊಂದು ವಿಚಾರವನ್ನೂ ತಿಳಿಸದೆ ಒಗಟಿನ ರೀತಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಮಾತನಾಡಿದ್ದಾರೆ.
ಮಾತಿನ ಮರ್ಮವೇನು?
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ, “ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ಅತಿ ದೊಡ್ಡ ಶಕ್ತಿ. ಅದು ನ್ಯಾಯಾಧೀಶರೇ ಆಗಿರಲಿ, ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಯಾರೇ ಆಗಿದ್ದರೂ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು,” ಎಂದು ಪ್ರತಿಪಾದಿಸಿದರು.
ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ತತ್ವದಂತೆ ಕಂಡರೂ, ಪ್ರಸ್ತುತ ರಾಜ್ಯ ರಾಜಕೀಯದ ಸನ್ನಿವೇಶದಲ್ಲಿ ಇದು ಮುಖ್ಯಮಂತ್ರಿ ಹುದ್ದೆಯ ಹಂಚಿಕೆಯ ಒಪ್ಪಂದದ ಕುರಿತಾದ ನೇರ ಸಂದೇಶ ಎಂದೇ ಭಾವಿಸಲಾಗುತ್ತಿದೆ.
Karnataka politics has heated up again as Deputy CM and KPCC president DK Shivakumar sparked discussions with a cryptic statement during a Constitution Day event. Saying “Word power is world power…
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm