ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am