ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm