ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am