ಡಿಕೆಶಿ ಮುಖ್ಯಮಂತ್ರಿಯಾದರೆ ಒಪ್ಪಿಕೊಳ್ಳುತ್ತೇವೆ ; ಮೆತ್ತಗಾದ ಪರಮೇಶ್ವರ್, ಸಿದ್ದರಾಮಯ್ಯ ಬಣದ ರಾಗ ಬದಲು ! 

27-11-25 12:55 pm       Bangalore Correspondent   ಕರ್ನಾಟಕ

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ಬೆಂಗಳೂರು, ನ.27 : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಕೂಡ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ, ಅದು ಸ್ವಾಭಾವಿಕ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ನಾವು ಅದನ್ನು ಸ್ವಾಭಾವಿಕವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು. 

ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಪರಮೇಶ್ವರ್ ಈ ಹೇಳಿಕೆ ನೀಡಿರುವ ರಾಜಕೀಯ ವಲಯದಲ್ಲಿ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ನಾಯಕತ್ವ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್ ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ ಎಂದರು.

ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ "ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ" ಎಂದು ಪರಮೇಶ್ವರ್ ಹೇಳಿದ್ದು ಎರಡೂವರೆ ವರ್ಷದ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.

Home Minister Dr. G. Parameshwara has made a significant political statement amid the ongoing leadership tussle in Karnataka. He said he would “naturally accept” DK Shivakumar as Chief Minister if the Congress High Command decides to change leadership.