ಬ್ರೇಕಿಂಗ್ ನ್ಯೂಸ್
02-12-25 10:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2 : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಇಮೇಲ್ ವಿಳಾಸಕ್ಕೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಶಾಪಿಂಗ್ ಮಾಲ್ ಮತ್ತು ಏರ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಶಾಪಿಂಗ್ ಮಾಲ್ಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶ ರವಾನೆಯಾಗಿದೆ. ನವೆಂಬರ್ 30, 2025 ರಂದು ಬೆಳಗ್ಗೆ 11.53ಕ್ಕೆ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಅನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್ಗೆ ಕಳುಹಿಸಲಾಗಿದೆ.
ಬೆದರಿಕೆ ಹಾಕಿದ ವ್ಯಕ್ತಿ ತನ್ನನ್ನು 'ಜೈಷ್-ಇ ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್' ಎಂದು ಪರಿಚಯಿಸಿ ಇಂಗ್ಲಿಷ್ನಲ್ಲಿ ಸಂದೇಶ ಬರೆದಿದ್ದಾನೆ. ಜೈಷ್-ಇ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್ನಿಂದ ಇದೊಂದು ಎಚ್ಚರಿಕೆ. ನಾವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಒರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಂತ್ರಿ ಸ್ಕ್ವೇರ್ ಮಾಲ್ ಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಸಂಜೆ 7 ಗಂಟೆಯ ನಂತರ ಬಾಂಬ್ ಸ್ಫೋಟಗೊಳ್ಳಲಿದೆ. ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು. ಅಲ್ಲದೆ, 'ಇದು ಸಂಭವಿಸದಿರಲು ಬಯಸಿದರೆ ನೀವು +91 936***8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಹಣಕ್ಕೆ ಬೇಡಿಕೆ ಇಡುವ ಪ್ರಯತ್ನವನ್ನೂ ಮಾಡಲಾಗಿದೆ.
ಬೆದರಿಕೆ ಇ-ಮೇಲ್ ಅನ್ನು ಮೋಹಿತ್ ಕುಮಾರ್ ಹೆಸರಿನ ಇಮೇಲ್ ಐಡಿ ಮೂಲಕ ರವಾನಿಸಲಾಗಿದೆ. ಸಂದೇಶವು ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಮಾಲ್ಗಳ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಸ್ಥಳಗಳನ್ನು ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.
ಈ ಬಗ್ಗೆ ಬೆಂಗಳೂರಿನ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇ-ಮೇಲ್ ಐಡಿಯಲ್ಲಿ ಉಲ್ಲೇಖಿಸಲಾದ 'ಮೋಹಿತ್ ಕುಮಾರ್' ಎಂಬಾತನೇ ಆರೋಪಿಯೇ ಅಥವಾ ಬೇರೆ ಯಾರೋ ಈ ಐಡಿ ಬಳಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A hoax email sent to the Bengaluru City Police Commissioner’s official address threatened bomb blasts at Kempegowda International Airport and major shopping malls in the city, claiming to be from the “Jaish-e-Mohammed White Collar Terror Team.” The email, sent on November 30, 2025, warned of explosions after 7 PM and even demanded money via a phone number.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am