ಬ್ರೇಕಿಂಗ್ ನ್ಯೂಸ್
05-12-25 10:00 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5 : ವೈದ್ಯೆಯಾಗಿದ್ದ ತಾಯಿ ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್ರೂಮ್ಗಳಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ನಗರದ ಅಶ್ವತ್ಥ ಬಡಾವಣೆಯಲ್ಲಿ ನಡೆದಿದೆ.
ತಾಯಿ ಡಾ.ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು. ಜಯಶ್ರೀ ಶಿವಮೊಗ್ಗದ ಹೊಮ್ಮರಡಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞೆಯಾಗಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಬರೆದಿಟ್ಟ ತಾಯಿ
ಆತ್ಮಹತ್ಯೆಗೂ ಮೊದಲು ತಾಯಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದನ್ನು ನೋಡಿ ಮಗ ಆಕಾಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು ವರ್ಷದ ಹಿಂದೆಯಷ್ಟೇ ಆಕಾಶ್ನ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಮಗ ಆಘಾತಕ್ಕೆ ಒಳಗಾಗಿದ್ದ. ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲಗಳ ಪ್ರಕಾರ, ಆಕಾಶ್ ರಿಯಲ್ ಎಸ್ಟೇಟ್ನಲ್ಲಿ ತಾನು ಹಣ ತೊಡಿಸಬೇಕು ಎಂದು ಅದಕ್ಕಾಗಿ ನನಗೆ ಹಣ ಬೇಕು ಎಂದು ಕೇಳುತ್ತಿದ್ದ ಎನ್ನಲಾಗುತ್ತಿದೆ. ಇದಕ್ಕೋಸ್ಕರನೇ ತಾಯಿ ಮತ್ತು ಮಗನ ಮಧ್ಯೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದು ಇತ್ತೀಚಿಗೆ ಮದುವೆಯಾಗಿ ಬಂದ ನವ್ಯಗೆ ಕೂಡ ಮಾಮೂಲಾಗಿತ್ತು. ಆದರೆ ಈ ಜಗಳ ವಿಕೋಪಕ್ಕೆ ಹೋಗಿದ್ದು ಅದು ಈ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಮತ್ತೊಂದು ಮೂಲಗಳ ಪ್ರಕಾರ ಇಬ್ಬರಿಗೂ ಮೊದಲನೇ ಪತ್ನಿಯ ಸಾವಿನ ಭಯ, ಖಿನ್ನತೆ ಕಾಡುತ್ತಿತ್ತು ಎನ್ನಲಾಗುತ್ತಿದೆ. ಮೂಲತಃ ನ್ಯಾಮತಿಯ ನಿವಾಸಿಗಳಾದ ಹೊಮ್ಮರಡಿ ಕುಟುಂಬಕ್ಕೆ ಆಸ್ತಿಗೇನು ಕೊರತೆ ಇರಲಿಲ್ಲ 25 ಎಕರೆ ತೋಟ, ಇರಲು ಮನೆ, ಹೊಮ್ಮರಡಿ ಕಾಂಪ್ಲೆಕ್ಸ್ ಅದರ ಬಾಡಿಗೆ ಹಣ, ಹೊನ್ನಾಳಿಯಲ್ಲಿ ಸೈಟ್ಗಳು ಎಲ್ಲವೂ ಇದ್ದವು ಆದರೆ ಬಹು ಮುಖ್ಯವಾಗಿ ಬೇಕಾಗಿದ್ದ ಮಾನಸಿಕ ನೆಮ್ಮದಿ ಇರಲಿಲ್ಲ ಅದುವೇ ಈ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ.
ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.
A tragic incident unfolded in Ashwatha Badavane, Shivamogga, where a well-known obstetrician, Dr. Jayashree (57), and her son Akash (32) died by suicide in separate bedrooms while Akash’s second wife was present in the house.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am