ಬ್ರೇಕಿಂಗ್ ನ್ಯೂಸ್
07-12-25 10:21 pm HK News Desk ಕರ್ನಾಟಕ
ಗಂಗಾವತಿ, ಡಿ 07 : ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಯುವತಿ ಮತ್ತು ಯುವಕ ಸಾವನ್ನಪ್ಪಿದ ದಾರುಣ ಘಟನೆ ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಮುಸ್ಟೂರು ಗ್ರಾಮದವರಾದ ಕವಿತಾ ಮತ್ತು ಇರಕಲ್ಗಡಾದ ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಐದು ತಿಂಗಳ ಹಿಂದೆ ನಡೆದಿತ್ತು. ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ, ಪ್ರಿ ವೆಡ್ಡಿಂಗ್ ಶೂಟಿಂಗ್ಗಾಗಿ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದರು. ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯ ಸೇರಿದಂತೆ ವಿವಿಧೆಡೆ ಸುತ್ತಾಡಿದ್ದರು. ಸಂಜೆಯಾಗುತ್ತಿದ್ದಂತೆ ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.
A young couple from Koppal, set to marry on December 21, lost their lives in a horrific road accident near Dasanal while returning from their pre-wedding shoot. A speeding lorry rammed into their bike, killing the bride-to-be on the spot and leaving the groom fatally injured.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm