ಬ್ರೇಕಿಂಗ್ ನ್ಯೂಸ್
07-12-25 10:21 pm HK News Desk ಕರ್ನಾಟಕ
ಗಂಗಾವತಿ, ಡಿ 07 : ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಯುವತಿ ಮತ್ತು ಯುವಕ ಸಾವನ್ನಪ್ಪಿದ ದಾರುಣ ಘಟನೆ ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಮುಸ್ಟೂರು ಗ್ರಾಮದವರಾದ ಕವಿತಾ ಮತ್ತು ಇರಕಲ್ಗಡಾದ ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಐದು ತಿಂಗಳ ಹಿಂದೆ ನಡೆದಿತ್ತು. ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ, ಪ್ರಿ ವೆಡ್ಡಿಂಗ್ ಶೂಟಿಂಗ್ಗಾಗಿ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದರು. ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯ ಸೇರಿದಂತೆ ವಿವಿಧೆಡೆ ಸುತ್ತಾಡಿದ್ದರು. ಸಂಜೆಯಾಗುತ್ತಿದ್ದಂತೆ ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.
A young couple from Koppal, set to marry on December 21, lost their lives in a horrific road accident near Dasanal while returning from their pre-wedding shoot. A speeding lorry rammed into their bike, killing the bride-to-be on the spot and leaving the groom fatally injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am