ಬ್ರೇಕಿಂಗ್ ನ್ಯೂಸ್
11-12-25 03:29 pm HK News Desk ಕರ್ನಾಟಕ
ಪಡುಬಿದ್ರಿ, ಡಿ.11 : ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಗುರುವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ ಏಳು ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳಾ ಕಾರ್ಮಿಕರಿದ್ದರು. ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಮಗುಚಿ ಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಒಬ್ಬ ಮಹಿಳೆ ಯಂತ್ರದ ಅಡಿಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರು. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ಹೊರ ತೆಗೆದಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A tragic accident occurred near the Hejamady Kannangaru Brahmabaidarkala Garadi on National Highway 66 on Thursday morning when a tempo transporting workers for concrete work overturned after a tyre burst. One woman died and several others were injured.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm