ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am