ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm