ಬ್ರೇಕಿಂಗ್ ನ್ಯೂಸ್
12-12-25 03:18 pm HK News Desk ಕರ್ನಾಟಕ
ಬೆಳಗಾವಿ, ಡಿ.12 : ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು. ಅದೊಂದು ಸೌಹಾರ್ದ ಭೋಜನ ಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹವೇ ಮುಖ್ಯ. ಅವಕಾಶ ಸಿಗದಿದ್ದರೆ ಹಣೆ ಬರಹಕ್ಕೆ ಹೊಣೆ ಯಾರು? ಭಗವಂತ ಏನು ಬರೆದಿದ್ದಾನೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ನಾವು ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.
Congress MLA Iqbal Hussain has claimed that Deputy Chief Minister D.K. Shivakumar will take over as the Chief Minister of Karnataka immediately after the Belagavi winter session concludes. Speaking to reporters in Belagavi on Friday morning, the Ramanagara MLA said, “As soon as the session ends, D.K. Shivakumar will be given the Chief Minister’s post.”
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm