ಬ್ರೇಕಿಂಗ್ ನ್ಯೂಸ್
13-12-25 08:38 pm HK News Desk ಕರ್ನಾಟಕ
ತುಮಕೂರು, ಡಿ.13 : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿರುವಂತೆಯೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸಿಎಂ ಆಗಲೆಂದು ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ತನ್ನ ಗೆಲುವಿಗೆ ಕೆಲವು ಕಾಂಗ್ರೆಸ್ ನಾಯಕರ ಸಹಕಾರವೂ ಇತ್ತೆಂದು ಹೇಳುವ ಮೂಲಕ ಹೊಸ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
ಹೆಗ್ಗೆರೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿ. ಸೋಮಣ್ಣ, ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ. ಇದನ್ನ ನಾನೊಬ್ಬನೇ ಹೇಳುತ್ತಿಲ್ಲ. ತುಮಕೂರಿನ ಮಹಾಜನತೆಯೂ ಹೇಳುತ್ತಿದ್ದಾರೆ ಎಂದರು.
ಪಕ್ಕದಲ್ಲಿದ್ದ ಶಾಸಕ ಸುರೇಶ್ ಗೌಡ, ಹಾಗಾದ್ರೆ ಡಿಕೆ ಶಿವಕುಮಾರ್ ಏನಾಗಬೇಕು? ಎಂದು ಪ್ರಶ್ನೆ ಮಾಡಿದರು. ಆಮೇಲೆ ಮಾತನಾಡೋಣ. ಅದೆಲ್ಲ ಸೆಕೆಂಡರಿ, ಅವರ ನಡವಳಿಕೆಯೂ ಬೇಕಲ್ಲ ಎಂದು ಹೇಳುವ ಮೂಲಕ ಸೋಮಣ್ಣ ವಿಷಯಾಂತರ ಮಾಡಿದರು.
ಇದೇ ವೇಳೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರೂ ತನ್ನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಪರಮೇಶ್ವರ್ ಅವರ ಸಮ್ಮುಖದಲ್ಲಿಯೇ ಕೆಲವು ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ವಿ. ಸೋಮಣ್ಣ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ. ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ಬಗ್ಗೆ ಚರ್ಚೆ ನಡೆಯುವಂತಾಗಿದೆ.
Amid the ongoing tussle within the Karnataka Congress over the chief minister’s post, Union Minister of State for Railways and Jal Shakti V. Somanna has openly backed Home Minister Dr G. Parameshwara as a potential Chief Minister, while also making a startling revelation that some Congress leaders had helped him secure his Lok Sabha victory.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm