ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am