ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am