ಬ್ರೇಕಿಂಗ್ ನ್ಯೂಸ್
16-12-25 12:57 pm HK News Desk ಕರ್ನಾಟಕ
ತುಮಕೂರು, ಡಿ.16 : ರಾಜ್ಯದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಕೆಲವು ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರ್ತಿದೆ. ಸೋಮವಾರ ಮಂಗಳೂರಿನ ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದ್ದು ಇದರ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೊಲೀಸರಿಂದ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಡಿಸಿ ಕಚೇರಿ ಸುತ್ತಮುತ್ತ ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗ್ತಿದೆ. ಮೈನ್ ಗೇಟ್ ನಲ್ಲಿ ಪೊಲೀಸರು ಒಬ್ಬೊಬ್ಬರನ್ನೇ ಪರಿಶೀಲಿಸುತ್ತಿದ್ದಾರೆ. ತುಮಕೂರು ಸಬ್ ಡಿವಿಷನ್ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.



100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:
ತುಮಕೂರು ಜಿಲ್ಲಾಧಿಕಾರಿ ಮೇಲ್ಗೆ ಬೆಳಗ್ಗೆ 6.59ಕ್ಕೆ ಇಮೇಲ್ ಬಂದಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಚೇತನ್ ಮತ್ತು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ತಹಶಿಲ್ದಾರ್ ಕಚೇರಿ, ಉಪತಹಶಿಲ್ದಾರ್ ಕಚೇರಿಯಲ್ಲಿ ಪರಿಶೀಲನೆ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ಸಭೆಗಳನ್ನ ರದ್ದುಗೊಳಿಸಲಾಗಿದೆ.
Following a bomb threat email sent earlier to the Mangaluru RTO office, the Tumakuru Deputy Commissioner’s office received a similar threat on Monday morning, causing panic among staff. The email, received at 6:59 AM, warned of explosives planted inside the DC office premises. Deputy Commissioner Shubha Kalyan immediately alerted the police, prompting swift action.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm