ಬ್ರೇಕಿಂಗ್ ನ್ಯೂಸ್
17-12-25 12:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ರೈಲ್ವೇ ವಿದ್ಯುದೀಕರಣ ಸಲುವಾಗಿ ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು- ಮಂಗಳೂರು- ಕಾರವಾರ ರೈಲು ಸೇವೆಯನ್ನು ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಕರಾವಳಿಗೆ ಸಂಚಾರ ಮಾಡುವ ವಿವಿಧ ರೈಲುಗಳಲ್ಲಿ ಒಂದಾದ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು (16575/16576) ಸೇವೆ ಮತ್ತೆ ಶುರುವಾಗಿದ್ದು ರೈಲ್ವೇ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಬೆಂಗಳೂರಿನ ಯಶವಂತಪುರದಿಂದ ಈ ರೈಲು ಸಂಚಾರ ಆರಂಭಿಸಲಿದ್ದು ವಾರದಲ್ಲಿ ಮೂರು ದಿನ ಇರಲಿದೆ. ಇತ್ತೀಚೆಗೆ ಯಶವಂತಪುರ, ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ಸೇವೆಯನ್ನು ಜೂನ್ ನಿಂದ ನವೆಂಬರ್ ವರೆಗೆ ಆರು ತಿಂಗಳ ಕಾಲ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸೇವೆ ಪುನಾರಂಭಿಸಲಾಗಿದೆ.
ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ಪ್ರಕೃತಿ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಈ ಗೊಮ್ಮಟೇಶ್ವರ ರೈಲಿಗೂ ವಿಸ್ಟಾಡೋಮ್ ಕೋಚ್ ಅಳವಡಿಸಿದೆ. ಅಗಲ ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣಿ, ವ್ಯವಸ್ಥಿತ ಆಸನಗಳಿದ್ದವು. ಇದರಿಂದ ಮಳೆಗಾಲದಲ್ಲಿ ಹಾಸನ, ಸಂಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಮಂಗಳೂರು ಮಾರ್ಗದುದ್ದಕ್ಕೂ ಕಾಣುವ ಪ್ರಕೃತಿಯನ್ನು ಸವಿಯಬಹುದಾಗಿತ್ತು. ಮಳೆಗಾಲದಲ್ಲೇ ಈ ರೈಲಿನ ರದ್ದತಿಯಿಂದ ಪ್ರಯಾಣಿಕರಿಗೆ ಒಂದಷ್ಟು ನಿರಾಸೆಯಾಗಿತ್ತು.
ಇದೀಗ ಶ್ರವಣಬೆಳಗೊಳ ಮೂಲಕ ಸಾಗುವ ಗೋಮಟೇಶ್ವರ ರೈಲು ಮತ್ತೆ ಆರಂಭಗೊಂಡಿದ್ದು ಯವಂತಪುರದಿಂದ ರವಿವಾರ, ಮಂಗಳವಾರ ಮತ್ತು ಗುರುವಾರ ಹೀಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತದೆ. ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ- ಪುತ್ತೂರು, ಬಂಟವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಗೊಮ್ಮಟೇಶ್ವರ ರೈಲು ಸೇವೆ ಪುನಾರಂಭಗೊಳ್ಳುತ್ತಿದ್ದಂತೆ ಟಿಕೆಟ್ ಬುಕ್ಕಿಂಗ್ ಸಹ ಆರಂಭಗೊಂಡಿದೆ. ಪ್ರಯಾಣಕ್ಕೂ ಮುನ್ನ ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.indianrail.gov.in ಭೇಟಿ ನೀಡಬೇಕು. ರೈಲಿನ ಸೇವೆ ಬಗ್ಗೆ ಮಾಹಿತಿ, ಟಿಕೆಟ್, ಮಾರ್ಗ ಇತರ ಮಾಹಿತಿಗಾಗಿ ಸಹಾಯವಾಣಿ 139ಕ್ಕೆ ಕರೆ ಮಾಡುವಂತೆ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Railway authorities have announced the resumption of the Yeshwantpur–Mangaluru–Karwar Gomateshwara Express (Train No. 16575/16576), bringing relief to passengers traveling to the coastal region. The train service, which was suspended for six months due to electrification and infrastructure works on the Yeshwantpur–Hassan–Sakleshpur route, has now been restarted.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm