ಬ್ರೇಕಿಂಗ್ ನ್ಯೂಸ್
17-12-25 12:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ರೈಲ್ವೇ ವಿದ್ಯುದೀಕರಣ ಸಲುವಾಗಿ ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು- ಮಂಗಳೂರು- ಕಾರವಾರ ರೈಲು ಸೇವೆಯನ್ನು ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಕರಾವಳಿಗೆ ಸಂಚಾರ ಮಾಡುವ ವಿವಿಧ ರೈಲುಗಳಲ್ಲಿ ಒಂದಾದ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು (16575/16576) ಸೇವೆ ಮತ್ತೆ ಶುರುವಾಗಿದ್ದು ರೈಲ್ವೇ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಬೆಂಗಳೂರಿನ ಯಶವಂತಪುರದಿಂದ ಈ ರೈಲು ಸಂಚಾರ ಆರಂಭಿಸಲಿದ್ದು ವಾರದಲ್ಲಿ ಮೂರು ದಿನ ಇರಲಿದೆ. ಇತ್ತೀಚೆಗೆ ಯಶವಂತಪುರ, ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ಸೇವೆಯನ್ನು ಜೂನ್ ನಿಂದ ನವೆಂಬರ್ ವರೆಗೆ ಆರು ತಿಂಗಳ ಕಾಲ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸೇವೆ ಪುನಾರಂಭಿಸಲಾಗಿದೆ.
ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ಪ್ರಕೃತಿ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಈ ಗೊಮ್ಮಟೇಶ್ವರ ರೈಲಿಗೂ ವಿಸ್ಟಾಡೋಮ್ ಕೋಚ್ ಅಳವಡಿಸಿದೆ. ಅಗಲ ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣಿ, ವ್ಯವಸ್ಥಿತ ಆಸನಗಳಿದ್ದವು. ಇದರಿಂದ ಮಳೆಗಾಲದಲ್ಲಿ ಹಾಸನ, ಸಂಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಮಂಗಳೂರು ಮಾರ್ಗದುದ್ದಕ್ಕೂ ಕಾಣುವ ಪ್ರಕೃತಿಯನ್ನು ಸವಿಯಬಹುದಾಗಿತ್ತು. ಮಳೆಗಾಲದಲ್ಲೇ ಈ ರೈಲಿನ ರದ್ದತಿಯಿಂದ ಪ್ರಯಾಣಿಕರಿಗೆ ಒಂದಷ್ಟು ನಿರಾಸೆಯಾಗಿತ್ತು.
ಇದೀಗ ಶ್ರವಣಬೆಳಗೊಳ ಮೂಲಕ ಸಾಗುವ ಗೋಮಟೇಶ್ವರ ರೈಲು ಮತ್ತೆ ಆರಂಭಗೊಂಡಿದ್ದು ಯವಂತಪುರದಿಂದ ರವಿವಾರ, ಮಂಗಳವಾರ ಮತ್ತು ಗುರುವಾರ ಹೀಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತದೆ. ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ- ಪುತ್ತೂರು, ಬಂಟವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಗೊಮ್ಮಟೇಶ್ವರ ರೈಲು ಸೇವೆ ಪುನಾರಂಭಗೊಳ್ಳುತ್ತಿದ್ದಂತೆ ಟಿಕೆಟ್ ಬುಕ್ಕಿಂಗ್ ಸಹ ಆರಂಭಗೊಂಡಿದೆ. ಪ್ರಯಾಣಕ್ಕೂ ಮುನ್ನ ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.indianrail.gov.in ಭೇಟಿ ನೀಡಬೇಕು. ರೈಲಿನ ಸೇವೆ ಬಗ್ಗೆ ಮಾಹಿತಿ, ಟಿಕೆಟ್, ಮಾರ್ಗ ಇತರ ಮಾಹಿತಿಗಾಗಿ ಸಹಾಯವಾಣಿ 139ಕ್ಕೆ ಕರೆ ಮಾಡುವಂತೆ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Railway authorities have announced the resumption of the Yeshwantpur–Mangaluru–Karwar Gomateshwara Express (Train No. 16575/16576), bringing relief to passengers traveling to the coastal region. The train service, which was suspended for six months due to electrification and infrastructure works on the Yeshwantpur–Hassan–Sakleshpur route, has now been restarted.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm